ದಾವಣಗೆರೆ, ಜ 14: ಫೆಬ್ರವರಿ 22 ರಿಂದ ಆರಂಭವಾಗುವ ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆಯನ್ನು ವ್ಯವಸ್ಥಿತವಾಗಿ ಆಚರಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಅವರು ಮಾತನಾಡುತ್ತಾ ಈ ಕೆಳಗಿನ ಪ್ರಮುಖ ಸೂಚನೆಗಳನ್ನು ನೀಡಿದರು:
-
ಮೂಲಸೌಕರ್ಯ: ದೇವಸ್ಥಾನದ ಸುತ್ತಮುತ್ತ ಸ್ವಚ್ಛತೆ, ನಿರಂತರ ವಿದ್ಯುತ್ ಪೂರೈಕೆ ಮತ್ತು ಗುಂಡಿ ಮುಕ್ತ ರಸ್ತೆಗಳಿಗೆ ಆದ್ಯತೆ.
-
ಜನದಟ್ಟಣೆ ನಿರ್ವಹಣೆ: ದಿನಕ್ಕೆ ಅಂದಾಜು 2 ಲಕ್ಷ ಭಕ್ತರು ಬರುವ ಸಾಧ್ಯತೆ ಇರುವುದರಿಂದ ಕುಡಿಯುವ ನೀರು, ಶೌಚಾಲಯ, ಆರೋಗ್ಯ ಕೇಂದ್ರ ಹಾಗೂ ಅಂಬುಲೆನ್ಸ್ ವ್ಯವಸ್ಥೆ ಕಡ್ಡಾಯ.
-
ಭದ್ರತೆ: ಪ್ರಮುಖ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಹಾಗೂ ಪೊಲೀಸ್ ಬಂದೋಬಸ್ತ್.
ಏನೇನು ನಿಷೇಧಿಸಲಾಗಿದೆ? ಜಿಲ್ಲಾಧಿಕಾರಿಗಳು ಸಾರ್ವಜನಿಕ ಹಿತದೃಷ್ಟಿಯಿಂದ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದ್ದಾರೆ:
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
- ಪ್ರಾಣಿ ಬಲಿ ನಿಷೇಧ: ದೇವಸ್ಥಾನ ಮತ್ತು ಸುತ್ತಮುತ್ತ ಪ್ರಾಣಿ ಬಲಿ ಸಂಪೂರ್ಣ ನಿಷೇಧ.
- ಮದ್ಯ ಮಾರಾಟ: ದೇವಸ್ಥಾನದ ಆವರಣದ ಸುತ್ತಮುತ್ತ ಮದ್ಯ ಮಾರಾಟ ಮಾಡುವಂತಿಲ್ಲ.
- ಹಿಲಿಯಂ ಬಲೂನ್: ಭದ್ರತಾ ದೃಷ್ಟಿಯಿಂದ ಹಿಲಿಯಂ ಗ್ಯಾಸ್ ಬಲೂನ್ಗಳ ಬಳಕೆಗೆ ನಿಷೇಧ.
- ಬೆತ್ತಲೆ ಸೇವೆ: ಬೆತ್ತಲೆ ಮತ್ತು ಅರೆಬೆತ್ತಲೆ ಸೇವೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
- ಬ್ಯಾನರ್ಗಳು: ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಕೆಗೆ ಪೂರ್ವಾನುಮತಿ ಕಡ್ಡಾಯ.
ನಿಯಮ ಉಲ್ಲಂಘಿಸುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
madhayakarnatakalive@gmail.com
