ಜಿಗಳಿ ಗುರುಧ್ಯಾನ ಶಾಲೆಯಲ್ಲಿ ಜನವರಿ 24 ರಂದು ‘ಗುರುಧ್ಯಾನ ಭಾವಂತರಂಗ’ ಸಂಭ್ರಮ

Author Picture
Published On: January 20, 2026
Invitation for Gurudhyana English Medium School Jigali Annual Day 2026 featuring Gurudhyana Bhavantaranga event details.

—Advertisement—

ಹರಿಹರ: ತಾಲ್ಲೂಕಿನ ಜಿಗಳಿ ಗ್ರಾಮದ ಗುರುಧ್ಯಾನ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಜನವರಿ 24 ರ ಶನಿವಾರ ಸಂಜೆ 5:30 ಕ್ಕೆ 2025-26ನೇ ಸಾಲಿನ ವಾರ್ಷಿಕೋತ್ಸವ ‘ಗುರುಧ್ಯಾನ ಭಾವಂತರಂಗ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಎಂ. ಕೆ. ಸ್ವಾಮಿ ಅವರು ವಹಿಸಲಿದ್ದು, ದಾವಣಗೆರೆಯ ಹೆಸರಾಂತ ಅರಿವಳಿಕೆ ತಜ್ಞರಾದ ಡಾ. ದಿನೇಶ್ ಕುಮಾರ್ ಎನ್. ರುದ್ರಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಶ್ವಿನಿ ಆಯುರ್ವೇದ ಕಾಲೇಜಿನ ಪ್ರಾಧ್ಯಾಪಕಿ ಡಾ. ಕಾವ್ಯ ಟಿ. ಜಿ. ಆಗಮಿಸಲಿದ್ದಾರೆ.

ಗೌರವ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸಮಾಲೋಚಕ ಚಂದ್ರಶೇಖರ್ ಕೆ. ಎಸ್., ಸಂಸ್ಥೆಯ ಕಾರ್ಯದರ್ಶಿ ಸಾನ್ವಿ ಎಂ. ಕೆ. ಸ್ವಾಮಿ ಹಾಗೂ ಗುರುಧ್ಯಾನ ಶಾಲೆ ನಿರ್ದೇಶಕರಾದ ನಾಗರಾಜ್ ಪಿ. ಓ. ಪಾಲ್ಗೊಳ್ಳಲಿದ್ದಾರೆ. ಶಾಲಾ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಪೋಷಕರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶಾಲಾ ಮುಖ್ಯೋಪಾಧ್ಯಾಯಿನಿ ಭಾರತಿ ತಳವಾರ್ ಕೋರಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

"ಮಧ್ಯ ಕರ್ನಾಟಕ ಲೈವ್ (Madhyakarnataka.live) ಕರ್ನಾಟಕದ ಹೃದಯಭಾಗದ ನೈಜ, ನಿಖರ ಮತ್ತು ಕ್ಷಣ ಕ್ಷಣದ ಸುದ್ದಿಗಳಿಗಾಗಿ ಮೀಸಲಾದ ಡಿಜಿಟಲ್ ಸುದ್ದಿ ವೇದಿಕೆಯಾಗಿದೆ. ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಮಧ್ಯ ಕರ್ನಾಟಕದ ಜಿಲ್ಲೆಗಳ ಸ್ಥಳೀಯ ಸಮಸ್ಯೆಗಳು, ರಾಜಕೀಯ, ಕೃಷಿ, ಶಿಕ್ಷಣ ಮತ್ತು ಸಾಂಸ್ಕೃತಿಕ ವಿದ್ಯಮಾನಗಳನ್ನು ಜಗತ್ತಿಗೆ ತಲುಪಿಸುವುದು ನಮ್ಮ ಗುರಿ. ನಾವು ಕೇವಲ ಸುದ್ದಿಯನ್ನಷ್ಟೇ ಅಲ್ಲ, ಜನರ ಧ್ವನಿಯಾಗಲು ಬಯಸುತ್ತೇವೆ."… Read More

Related News

Latest Comments

Leave a Comment

Home
Web Stories
Instagram
WhatsApp