ದಾವಣಗೆರೆ ಕಾಂಗ್ರೆಸ್‌ನಲ್ಲಿ ಬಿ-ಫಾರಂ ಸಮರ: ಕೈ ಅಭ್ಯರ್ಥಿ ಸಮರ್ಥ್‌ಗೆ ಸಾದಿಕ್ ಪೈಲ್ವಾನ್ ಸೆಡ್ಡು; ಬಂಡಾಯದ ಕಹಳೆ!

Sadik Pailwan filing nomination for Davanagere South by-election against Congress candidate Samarth
— ದಾವಣಗೆರೆ: ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸಮರ್ಥ್ ವಿರುದ್ಧ ಬಂಡಾಯ ಎದ್ದಿರುವ ಸಾದಿಕ್ ಪೈಲ್ವಾನ್ ಅವರು ನಾಮಪತ್ರ ಸಲ್ಲಿಸಿದ ಕ್ಷಣ.

—Election Update—

ದಾವಣಗೆರೆ: ಜಿಲ್ಲೆಯ ರಾಜಕೀಯದ ದಿಕ್ಸೂಚಿ ಎಂದೇ ಕರೆಯಲ್ಪಡುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡ ಈಗ ಅನಿರೀಕ್ಷಿತ ತಿರುವು ಪಡೆದುಕೊಂಡಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈಗಾಗಲೇ ಪ್ರಚಾರ ಆರಂಭಿಸಿರುವ ಸಮರ್ಥ್ ಅವರಿಗೆ ಈಗ ಸ್ವಪಕ್ಷದವರಿಂದಲೇ ಭಾರೀ ಪ್ರತಿರೋಧ ಎದುರಾಗಿದೆ. ದಾವಣಗೆರೆಯ ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಅಲ್ಪಸಂಖ್ಯಾತ ಮುಖಂಡ ಸಾದಿಕ್ ಪೈಲ್ವಾನ್ ಅವರು ಬಂಡಾಯದ ಬಾವುಟ ಹಾರಿಸಿ, ಕಾಂಗ್ರೆಸ್ ಅಭ್ಯರ್ಥಿಯಾಗಿಯೇ ನಾಮಪತ್ರ ಸಲ್ಲಿಸುವ ಮೂಲಕ ಸಂಚಲನ ಮೂಡಿಸಿದ್ದಾರೆ.

ನಿಷ್ಠಾವಂತ ಕಾರ್ಯಕರ್ತನ ಬಂಡಾಯ ಯಾಕೆ?

ಸುದೀರ್ಘ ಕಾಲದಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿರುವ ಸಾದಿಕ್ ಪೈಲ್ವಾನ್, ಈ ಬಾರಿ ತಮಗೆ ಟಿಕೆಟ್ ಸಿಗಲೇಬೇಕೆಂದು ಪಟ್ಟು ಹಿಡಿದಿದ್ದಾರೆ. “ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಈಗಾಗಲೇ ನಾಲ್ಕು ಬಾರಿ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದೇನೆ. ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಅಲ್ಪಸಂಖ್ಯಾತರಿಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಈಗ ನನಗೆ ಬಿ-ಫಾರಂ ಸಿಗುವ ಸಂಪೂರ್ಣ ವಿಶ್ವಾಸವಿದೆ” ಎಂದು ಅವರು ವಿಡಿಯೋದಲ್ಲಿ ಗುಡುಗಿದ್ದಾರೆ.

ಸೋಮವಾರ ಶಕ್ತಿ ಪ್ರದರ್ಶನ:

ಈಗಾಗಲೇ ಒಂದು ಸೆಟ್ ನಾಮಪತ್ರ ಸಲ್ಲಿಸಿರುವ ಸಾದಿಕ್ ಪೈಲ್ವಾನ್, ಬರುವ ಸೋಮವಾರದಂದು ತಮ್ಮ ಸಾವಿರಾರು ಅಭಿಮಾನಿಗಳು ಹಾಗೂ ಬೆಂಬಲಿಗರೊಂದಿಗೆ ಆಗಮಿಸಿ ಮತ್ತೊಂದು ಅಫಿಡವಿಟ್ ಸಲ್ಲಿಸುವುದಾಗಿ ಘೋಷಿಸಿದ್ದಾರೆ. “ಹೈಕಮಾಂಡ್ ಮತ್ತು ರಾಜ್ಯ ನಾಯಕರೊಂದಿಗೆ ಮಾತುಕತೆ ನಡೆಯುತ್ತಿದೆ. ನನಗೆ ಬಿ-ಫಾರಂ ಸಿಗುವುದು 100% ಖಚಿತ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ಗೆ ತಲೆನೋವಾದ ಅಲ್ಪಸಂಖ್ಯಾತ ಮತಗಳು:

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತಗಳು ನಿರ್ಣಾಯಕವಾಗಿವೆ. ಸಾದಿಕ್ ಪೈಲ್ವಾನ್ ಅವರ ಈ ನಡೆ ಅಧಿಕೃತ ಅಭ್ಯರ್ಥಿ ಸಮರ್ಥ್ ಅವರಿಗೆ ಭಾರಿ ಹಿನ್ನಡೆಯಾಗುವ ಸಾಧ್ಯತೆ ಇದೆ. ಒಂದು ವೇಳೆ ಪಕ್ಷವು ಇವರನ್ನು ಮನವೊಲಿಸುವಲ್ಲಿ ವಿಫಲವಾದರೆ, ಕಾಂಗ್ರೆಸ್ ಮತಗಳು ವಿಭಜನೆಯಾಗಿ ಬಿಜೆಪಿಯ ಶ್ರೀನಿವಾಸ್ ದಾಸಕರಿಯಪ್ಪ ಅವರಿಗೆ ವರದಾನವಾಗುವ ಆತಂಕ ಎದುರಾಗಿದೆ.

ಪಕ್ಷದ ಬಿ-ಫಾರಂ ಅಂತಿಮವಾಗಿ ಯಾರ ಕೈ ಸೇರಲಿದೆ? ಸಾದಿಕ್ ಪೈಲ್ವಾನ್ ಅವರನ್ನು ಸಮಾಧಾನಪಡಿಸಲು ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಯಾವ ತಂತ್ರ ರೂಪಿಸಲಿದ್ದಾರೆ ಎಂಬುದು ಈಗ ಕುತೂಹಲ ಮೂಡಿಸಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp