ಚಿತ್ರದುರ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಆಕೆಯ ಸಂಬಂಧಿಕರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ, ಆಸಿಡ್ ಸುರಿದು ಪರಾರಿಯಾಗಿದ್ದ ಭೀಕರ ಘಟನೆಯ ಆರೋಪಿಯನ್ನು ಚಿತ್ರದುರ್ಗದ ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಘಟನೆಯ ವಿವರ:
ದಿನಾಂಕ 19.03.2026 ರಂದು ಚಿತ್ರದುರ್ಗದ ಬಾಲಾಜಿ ಬಡಾವಣೆಯಲ್ಲಿ ವಾಸವಿದ್ದ ತಹಸೀನಾಬಾನು ಮತ್ತು ಆಕೆಯ ಸಂಬಂಧಿಕರ ಮೇಲೆ ಈ ದಾಳಿ ನಡೆದಿತ್ತು. ಆರೋಪಿ ಸುಹೇಲ್ ಬಾಷಾ, ತನ್ನ ಪತ್ನಿ ತಹಸೀನಾಬಾನು ಬೆಂಗಳೂರಿಗೆ ಹೋಗಿ ಒಂಟಿಯಾಗಿ ಬದುಕುತ್ತಿದ್ದಾಳೆ ಎಂಬ ದ್ವೇಷದಿಂದ ಆಕೆ ಇದ್ದ ಮನೆಗೆ ನುಗ್ಗಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ತನ್ನ ಕೈಯಲ್ಲಿದ್ದ ಮಚ್ಚಿನಿಂದ ಆಕೆಯ ಬೆನ್ನಿಗೆ ಹೊಡೆದು ತೀವ್ರ ರಕ್ತಗಾಯ ಮಾಡಿದ್ದಾನೆ.

ಅಷ್ಟಕ್ಕೇ ನಿಲ್ಲದ ಈತ, ತಾನು ತಂದಿದ್ದ ಆಸಿಡ್ ಅನ್ನು ಪತ್ನಿಯ ಮೇಲೆ ಸುರಿದಿದ್ದಾನೆ. ಈ ವೇಳೆ ಆಕೆಯನ್ನು ರಕ್ಷಿಸಲು ಬಂದ ಸಂಬಂಧಿಕರಾದ ನಗ್ಮಾ ನಾಯ್ಕ್, ನೇಹಾ, ರೋಷಿನಿ ಮತ್ತು ಇಕ್ರಾ ಫಾತೀಮಾ ಅವರ ಮೇಲೂ ಆಸಿಡ್ ಬಿದ್ದಿದ್ದು, ಎಲ್ಲರೂ ಸುಟ್ಟ ಗಾಯಗಳಿಂದ ನರಳುತ್ತಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಪೊಲೀಸ್ ಕಾರ್ಯಾಚರಣೆ:
ಘಟನೆ ನಡೆದ ಬೆನ್ನಲ್ಲೇ ಚಿತ್ರದುರ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ರಂಜಿತ್ ಕುಮಾರ್ ಬಂಡಾರು (IPS) ಮಾರ್ಗದರ್ಶನದಲ್ಲಿ 3 ವಿಶೇಷ ತಂಡಗಳನ್ನು ರಚಿಸಲಾಗಿತ್ತು. ತೀವ್ರ ಹುಡುಕಾಟ ನಡೆಸಿದ ತಂಡವು 23.03.2026 ರಂದು ಆರೋಪಿ ಸುಹೇಲ್ ಬಾಷಾನನ್ನು ಪತ್ತೆ ಹಚ್ಚಿ ಬಂಧಿಸಿದೆ. ಯಶಸ್ವಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಎಸ್ಪಿಯವರು ಶ್ಲಾಘಿಸಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
