ಪೋಕ್ಸೋ ಕೇಸ್: ಹರಿಹರ ಗ್ರಾಮಾಂತರ ಠಾಣೆಯಲ್ಲಿ ವಚನಾನಂದ ಶ್ರೀಗಳ ವಿಚಾರಣೆ, ವೈದ್ಯಕೀಯ ತಪಾಸಣೆ!

Author Picture
Published On: May 14, 2026

—Election Update—

ದಾವಣಗೆರೆ/ಹರಿಹರ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದ ಮೇಲೆ ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಇಂದು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ವಿಚಾರಣೆ ಎದುರಿಸಿದ್ದಾರೆ.

ಘಟನೆಯ ಸಂಪೂರ್ಣ ವಿವರ:

  • ಎಫ್‌ಐಆರ್ ದಾಖಲು: 16 ವರ್ಷದ ಸಂತ್ರಸ್ತ ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಮೇ 7 ರಂದು ಗದಗದ ಲಕ್ಷ್ಮೇಶ್ವರ ಠಾಣೆಯಲ್ಲಿ ವಚನಾನಂದ ಶ್ರೀಗಳ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ತದನಂತರ ಈ ಪ್ರಕರಣವನ್ನು ಹರಿಹರ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

  • ಏನಿದು ಆರೋಪ?: ಬಡತನದ ಕಾರಣಕ್ಕೆ 6, 7 ಮತ್ತು 8ನೇ ತರಗತಿ ಓದುತ್ತಿದ್ದ ಬಾಲಕನನ್ನು ಊಟ, ವಸತಿ ಮತ್ತು ವ್ಯಾಸಂಗಕ್ಕಾಗಿ ಮಠದಲ್ಲಿ ಬಿಡಲಾಗಿತ್ತು. ಆದರೆ, 2021 ರಿಂದ 2024 ರ ಅವಧಿಯಲ್ಲಿ ಮಠದಲ್ಲಿ ಶಾಲೆಗೆ ಹೋಗುವ ಮುನ್ನ ಸ್ನಾನಗೃಹದಲ್ಲಿ ಬಾಲಕರೊಂದಿಗೆ ಸ್ವಾಮೀಜಿ ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂಬ ಭೀಕರ ಆರೋಪ ದೂರಿನಲ್ಲಿದೆ.

  • ಜೀವ ಬೆದರಿಕೆ: ಮಕ್ಕಳು ಪ್ರತಿರೋಧ ವ್ಯಕ್ತಪಡಿಸಿದರೆ ಅವರಿಗೆ ಹೊಡೆದು, ಬಡಿದು ಹಲ್ಲೆ ಮಾಡಿದ್ದಲ್ಲದೆ, “ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಜೀವ ತೆಗೆಯುತ್ತೇನೆ” ಎಂದು ಬೆದರಿಕೆ ಹಾಕಿ, ಊಟ ನೀಡದೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.

  • ಪೊಲೀಸ್ ವಿಚಾರಣೆ: ನಿನ್ನೆ ರಾತ್ರಿಯೇ ಪೊಲೀಸರು ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ 9 ಗಂಟೆಗೆ ಸ್ವಾಮೀಜಿ ಹರಿಹರ ಗ್ರಾಮಾಂತರ ಠಾಣೆಗೆ ಖುದ್ದಾಗಿ ಹಾಜರಾಗಿದ್ದಾರೆ. ಪಿಎಸ್‌ಐ ಮಂಜುಳಾ ಮತ್ತು ಸರ್ಕಲ್ ಇನ್ಸ್‌ಪೆಕ್ಟರ್ ಸುರೇಶ್ ಸಗರಿ ನೇತೃತ್ವದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ನಿರಂತರ ವಿಚಾರಣೆ ನಡೆದಿದ್ದು, ಪೊಲೀಸರು ಸ್ವಾಮೀಜಿಯವರಿಂದ ಲಿಖಿತ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

  • ವೈದ್ಯಕೀಯ ಪರೀಕ್ಷೆ: ಪೊಲೀಸ್ ಠಾಣೆಯ ವಿಚಾರಣೆಯ ಬಳಿಕ ವಚನಾನಂದ ಸ್ವಾಮೀಜಿಯನ್ನು ಹರಿಹರ ತಾಲೂಕು ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯಲಾಗುತ್ತಿದೆ.

ಬಂಧನ ಭೀತಿಯಿಂದ ಪಾರು: ಮಠದ ಟ್ರಸ್ಟಿಗಳು ತಮ್ಮ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಆರೋಪಿಸಿರುವ ವಚನಾನಂದ ಶ್ರೀಗಳು, ಈ ಮೊದಲೇ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು (Anticipatory Bail) ಪಡೆದುಕೊಂಡಿದ್ದಾರೆ. ಹೀಗಾಗಿ ಸದ್ಯಕ್ಕೆ ಬಂಧನದ ಭೀತಿಯಿಂದ ಪಾರಾಗಿದ್ದು, ತನಿಖೆಗೆ ಸಹಕರಿಸುತ್ತಿದ್ದಾರೆ.

ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ನೋಡ್ತಾ ಇರಿ: Madhyakarnataka.live

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

"ಮಧ್ಯ ಕರ್ನಾಟಕ ಲೈವ್ (Madhyakarnataka.live) ಕರ್ನಾಟಕದ ಹೃದಯಭಾಗದ ನೈಜ, ನಿಖರ ಮತ್ತು ಕ್ಷಣ ಕ್ಷಣದ ಸುದ್ದಿಗಳಿಗಾಗಿ ಮೀಸಲಾದ ಡಿಜಿಟಲ್ ಸುದ್ದಿ ವೇದಿಕೆಯಾಗಿದೆ. ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಮಧ್ಯ ಕರ್ನಾಟಕದ ಜಿಲ್ಲೆಗಳ ಸ್ಥಳೀಯ ಸಮಸ್ಯೆಗಳು, ರಾಜಕೀಯ, ಕೃಷಿ, ಶಿಕ್ಷಣ ಮತ್ತು ಸಾಂಸ್ಕೃತಿಕ ವಿದ್ಯಮಾನಗಳನ್ನು ಜಗತ್ತಿಗೆ ತಲುಪಿಸುವುದು ನಮ್ಮ ಗುರಿ. ನಾವು ಕೇವಲ ಸುದ್ದಿಯನ್ನಷ್ಟೇ ಅಲ್ಲ, ಜನರ ಧ್ವನಿಯಾಗಲು ಬಯಸುತ್ತೇವೆ."… Read More

Related News

Home
Web Stories
Instagram
WhatsApp