ಚಿತ್ರಹಳ್ಳಿ ಸರ್ಕಾರಿ ಕಾಲೇಜು ವಾರ್ಷಿಕೋತ್ಸವ: ₹10.50 ಕೋಟಿ ವೆಚ್ಚದ ವಿದ್ಯಾರ್ಥಿನಿಲಯದ ಭರವಸೆ ನೀಡಿದ ಶಾಸಕ ಎಂ. ಚಂದ್ರಪ್ಪ!

MLA Dr. M Chandrappa addressing the annual day event at Government First Grade College Chitrahalli along with Principal Dr. Mohan A.

—Election Update—

ಚಿತ್ರಹಳ್ಳಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪಠ್ಯ ಪೂರಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಎಂ. ಚಂದ್ರಪ್ಪನವರು ಉದ್ಘಾಟಿಸಿದರು. ಕಾಲೇಜಿನ ಕುಂದುಕೊರತೆಗಳನ್ನು ಆಲಿಸಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, “ತಂದೆ-ತಾಯಿ ಹಾಗೂ ಗುರುಗಳಿಗೆ ಒಳ್ಳೆಯ ಹೆಸರನ್ನು ತರುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕರ್ತವ್ಯ. ಭವಿಷ್ಯದ ಉದ್ಧಾರಕ್ಕೆ ಶಿಕ್ಷಣವೇ ಅತ್ಯಂತ ಬಲಿಷ್ಠವಾದ ಅಸ್ತ್ರ” ಎಂದು ಕಿವಿಮಾತು ಹೇಳಿದರು. ಇದೇ ಸಂದರ್ಭದಲ್ಲಿ ಕಾಲೇಜು ಆವರಣದಲ್ಲಿ ಸುಮಾರು ₹10 ಕೋಟಿ 50 ಲಕ್ಷ ವೆಚ್ಚದಲ್ಲಿ ನೂತನ ವಿದ್ಯಾರ್ಥಿ ನಿಲಯ (Hostel) ಹಾಗೂ ₹10 ಲಕ್ಷ ವೆಚ್ಚದಲ್ಲಿ ಕಂಪ್ಯೂಟರ್ ಲ್ಯಾಬ್ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು. ಹೆಣ್ಣುಮಕ್ಕಳ ಶಿಕ್ಷಣಕ್ಕೆ ವಿಶೇಷ ಪ್ರೋತ್ಸಾಹ ನೀಡುವುದಾಗಿ ಅವರು ಇದೇ ವೇಳೆ ತಿಳಿಸಿದರು.

“ಗ್ರಾಮೀಣ ಪ್ರದೇಶದ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ನಾನು ಸದಾ ಸಿದ್ಧನಿದ್ದೇನೆ.”
— ಡಾ. ಎಂ. ಚಂದ್ರಪ್ಪ, ಶಾಸಕರು

ಬಿ.ಎಸ್ಸಿ ವಿಭಾಗಕ್ಕೆ ಸೌಲಭ್ಯಗಳ ಮಹಾಪೂರ: ಸ್ಥಳೀಯ ಮುಖಂಡ ದೇವೇಂದ್ರಪ್ಪ

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸ್ಥಳೀಯ ಮುಖಂಡರಾದ ದೇವೇಂದ್ರಪ್ಪನವರು ಮಾತನಾಡಿ, “ಈ ಬಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿರುವುದು ಸಂತಸದ ವಿಷಯ. ಪ್ರಸ್ತುತ ಸಾಲಿನಲ್ಲಿ ಕಾಲೇಜಿನಲ್ಲಿ ಬಿ.ಎಸ್ಸಿ (B.Sc) ವಿಭಾಗ ಆರಂಭವಾಗಿದ್ದು, ಅದಕ್ಕೆ ಬೇಕಾದ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಲು ಶಾಸಕರೊಂದಿಗೆ ಸೇರಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು,” ಎಂದರು.

ಕಾಲೇಜಿನ ಪ್ರಗತಿಗೆ ಪ್ರಾಂಶುಪಾಲರ ಶ್ಲಾಘನೆ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಮೋಹನ್ ಎ. ಅವರು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಕಾಲೇಜಿನ ಶೈಕ್ಷಣಿಕ ಪ್ರಗತಿಯ ಕುರಿತು ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ಶ್ರಮವನ್ನು ಶ್ಲಾಘಿಸಿದ ಅವರು, ಕಾಲೇಜಿನ ಮುಂದಿನ ಅಭಿವೃದ್ಧಿ ಯೋಜನೆಗಳನ್ನು ಹಂಚಿಕೊಂಡರು.

 

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp