ಚಿತ್ರದುರ್ಗದ ಹಲವೆಡೆ ಇಂದು ಇಡೀ ದಿನ ಕರೆಂಟ್ ಕಟ್: ಯಾವೆಲ್ಲಾ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ?

chitradurga-power-cut-bescom-news

—Election Update—

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ನಗರದ ಕೈಗಾರಿಕಾ ಪ್ರದೇಶ ಹಾಗೂ ಸುತ್ತಮುತ್ತಲಿನ ಹಲವು ಬಡಾವಣೆಗಳ ನಿವಾಸಿಗಳಿಗೆ ಪ್ರಮುಖ ಸೂಚನೆಯೊಂದನ್ನು ನೀಡಲಾಗಿದೆ. ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜೂನ್ 02ರಂದು ( ಇಂದು) ನಗರದ ಹಲವು ಪ್ರದೇಶಗಳಲ್ಲಿ ಇಡೀ ದಿನ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಣೆಯಲ್ಲಿ ತಿಳಿಸಿದೆ.

ಬೆಸ್ಕಾಂ ಚಿತ್ರದುರ್ಗ ನಗರ ಉಪವಿಭಾಗದ ಘಟಕ-1ರ ವ್ಯಾಪ್ತಿಯಲ್ಲಿ ಬರುವ 11 ಕೆ.ವಿ ಸಾಮರ್ಥ್ಯದ ‘ಎಫ್-08 ಇಂಡಸ್ಟ್ರಿಯಲ್ ಏರಿಯಾ’ ಮಾರ್ಗದಲ್ಲಿ ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರಣದಿಂದಾಗಿ ಜೂನ್ 2ರ ಬೆಳಗ್ಗೆಯಿಂದ ಸಂಜೆಯವರೆಗೆ ಕರೆಂಟ್ ಇರುವುದಿಲ್ಲ.

ಯಾವ ಸಮಯದಲ್ಲಿ ವಿದ್ಯುತ್ ಇರುವುದಿಲ್ಲ?

ಬೆಸ್ಕಾಂ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಜೂನ್ 02ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ ಒಟ್ಟು 8 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ.

ಬಾಧಿತವಾಗುವ ಪ್ರದೇಶಗಳ ಪಟ್ಟಿ:

ಚಿತ್ರದುರ್ಗ ನಗರದ ಈ ಕೆಳಗಿನ ಪ್ರಮುಖ ಬಡಾವಣೆಗಳು ಮತ್ತು ಸುತ್ತಮುತ್ತಲಿನ ಸಾರ್ವಜನಿಕರು ವಿದ್ಯುತ್ ಇಲ್ಲದೆ ತೊಂದರೆ ಅನುಭವಿಸಬೇಕಾಗಬಹುದು:

  • ಇಂಡಸ್ಟ್ರಿಯಲ್ ಏರಿಯಾ (ಕೈಗಾರಿಕಾ ಪ್ರದೇಶ)
  • ಹಳೇ ಬೆಂಗಳೂರು ರಸ್ತೆ
  • ಚಳ್ಳಕೆರೆ ಗೇಟ್
  • ವೇಮನ ನಗರ
  • ನಾರಾಯಣಪ್ಪ ಲೇಔಟ್
  • ಆದಿಸಕ್ತಿ ನಗರ ಹಾಗೂ ಈ ಮಾರ್ಗಕ್ಕೆ ಒಳಪಡುವ ಸುತ್ತಮುತ್ತಲಿನ ಪ್ರದೇಶಗಳು.

“ಸಾರ್ವಜನಿಕರು ಮತ್ತು ಕೈಗಾರಿಕಾ ಉದ್ಯಮಿಗಳು ಈ ತುರ್ತು ಕಾಮಗಾರಿಗೆ ಸ್ಪಂದಿಸಬೇಕು. ವಿದ್ಯುತ್ ವ್ಯತ್ಯಯದ ಸಮಯದಲ್ಲಿ ಬೆಸ್ಕಾಂ ಜೊತೆ ಸಹಕರಿಸಬೇಕು,” ಎಂದು ಚಿತ್ರದುರ್ಗ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ನಿವಾಸಿಗಳು ಮುಂಜಾಗ್ರತೆಯಾಗಿ ತಮ್ಮ ಗೃಹ ಬಳಕೆಯ ನೀರು ಹಾಗೂ ಇತರೆ ಅಗತ್ಯ ಕೆಲಸಗಳನ್ನು ಬೆಳಗ್ಗೆ 10 ಗಂಟೆಯ ಒಳಗೆ ವ್ಯವಸ್ಥೆ ಮಾಡಿಕೊಳ್ಳುವುದು ಒಳಿತು.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp