ಚಿತ್ರದುರ್ಗ: ವಿಶ್ವ ಪರಿಸರ ದಿನಾಚರಣೆಯ ವಿಶೇಷ ಅಂಗವಾಗಿ, ರಾಷ್ಟ್ರೀಯ ವಿಕಾಸ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಆಸಕ್ತ ರೈತರಿಗಾಗಿ ಒಂದು ದಿನದ ವಿಶೇಷ ‘ಸಾವಯವ ಕೃಷಿ’ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದೇ ಜೂನ್ 05ರಂದು ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈ ಕಾರ್ಯಾಗಾರ ನಡೆಯಲಿದೆ.
ಏನೆಲ್ಲಾ ತರಬೇತಿ ಇರಲಿದೆ?
ಈ ಒಂದು ದಿನದ ತರಬೇತಿಯಲ್ಲಿ ಕೃಷಿ ಕ್ಷೇತ್ರದ ಅನುಭವಿಗಳು ಹಾಗೂ ಪ್ರಗತಿಪರ ರೈತರು ಭಾಗವಹಿಸಿ ಉಪಯುಕ್ತ ಮಾಹಿತಿ ನೀಡಲಿದ್ದಾರೆ:

ಸಾವಯವ ಪದ್ಧತಿ ಮತ್ತು ನೀರು ನಿರ್ವಹಣೆ: ಬ್ಯಾಡರಹಳ್ಳಿಯ ಪ್ರಗತಿಪರ ಕೃಷಿಕರಾದ ಇಂದೂಧರ ಅವರು ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಲ್ಲಿ ಸಾವಯವ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಹೇಗೆ ಮತ್ತು ನೀರು-ಪೋಷಕಾಂಶಗಳನ್ನು ಸಮರ್ಪಕವಾಗಿ ಹೇಗೆ ನಿರ್ವಹಿಸಬೇಕು ಎಂಬುದರ ಕುರಿತು ಪ್ರಾಯೋಗಿಕ ಮಾರ್ಗದರ್ಶನ ನೀಡಲಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಜೇನು ಕೃಷಿ ಮಾಹಿತಿ: ಹಿರಿಯೂರಿನ ಪ್ರಗತಿಪರ ಕೃಷಿಕರಾದ ಶ್ರೀನಿವಾಸ್ ಅವರು ಜೇನು ಸಾಕಾರದ ಪ್ರಾಮುಖ್ಯತೆ, ಜೇನಿನ ಉಪ ಉತ್ಪನ್ನಗಳು ಮತ್ತು ಜೇನು ಕುಟುಂಬಗಳ ವೈಜ್ಞಾನಿಕ ನಿರ್ವಹಣೆಯ ಬಗ್ಗೆ ತಮ್ಮ ಯಶಸ್ಸಿನ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಸುಸ್ಥಿರ ಸಮಗ್ರ ಕೃಷಿ: ಕೃಷಿ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕರಾದ ರಜನಿಕಾಂತ ಆರ್ ಅವರು ಕಡಿಮೆ ಖರ್ಚಿನಲ್ಲಿ ಹೆಚ್ವು ಲಾಭ ತರುವ ಸುಸ್ಥಿರ ಸಮಗ್ರ ಕೃಷಿ ಪದ್ಧತಿಯ (Integrated Farming System) ಕುರಿತು ರೈತರಿಗೆ ಸವಿಸ್ತಾರವಾಗಿ ವಿವರಿಸಲಿದ್ದಾರೆ.
ನೋಂದಣಿ ಹೇಗೆ?
ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಯ ಕೇವಲ 50 ಆಸಕ್ತ ರೈತರಿಗೆ ಮಾತ್ರ ಮೊದಲ ಆದ್ಯತೆಯ ಮೇರೆಗೆ ಅವಕಾಶ ಕಲ್ಪಿಸಲಾಗಿದೆ. ತರಬೇತಿಗೆ ಬರಬಯಸುವ ರೈತರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ (Aadhaar Card) ಅಥವಾ ಎಫ್.ಐ.ಡಿ (FID) ಸಂಖ್ಯೆಯನ್ನು ಜೊತೆಯಲ್ಲಿ ತರಬೇಕಾಗುತ್ತದೆ.
ಹೆಸರು ನೋಂದಾಯಿಸಿಕೊಳ್ಳಲು ಮತ್ತು ಹೆಚ್ಚಿನ ಮಾಹಿತಿಗಾಗಿ ರೈತರು ತಕ್ಷಣವೇ 8277931058 ಮೊಬೈಲ್ ಸಂಖ್ಯೆಗೆ ಕರೆ ಮಾಡಬಹುದು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರಾದ ಆರ್.ರಜನಿಕಾಂತ ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
