ಚಿತ್ರದುರ್ಗ: ದೇಶದ ಭವಿಷ್ಯದ ಯೋಜನೆಗಳ ರೂಪರೇಷೆಗೆ ಅಡಿಪಾಯವಾಗಿರುವ ‘ಭಾರತ ಜನಗಣತಿ-2027’ ಪ್ರಕ್ರಿಯೆ ಚುರುಕುಗೊಂಡಿದೆ. ಈ ಬಾರಿ ಸಾರ್ವಜನಿಕರು ತಾವಾಗಿಯೇ ಮಾಹಿತಿ ನೀಡುವ “ಸ್ವಯಂ ಗಣತಿ” (Self-Enumeration) ಪದ್ಧತಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, 2026ರ ಏಪ್ರಿಲ್ 1 ರಿಂದ ಈ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.
ನೋಂದಣಿ ಮಾಡಿಕೊಳ್ಳುವುದು ಹೇಗೆ?
ಸಾರ್ವಜನಿಕರು 2026ರ ಏಪ್ರಿಲ್ 01 ರಿಂದ 15 ರವರೆಗೆ ನಿಗದಿಪಡಿಸಿದ ಅವಧಿಯಲ್ಲಿ ಜನಗಣತಿ ಇಲಾಖೆಯ ಅಧಿಕೃತ ವೆಬ್ಸೈಟ್ www.se.census.gov.in ಗೆ ಭೇಟಿ ನೀಡಬೇಕು. ಅಲ್ಲಿ ತಮ್ಮ ಕುಟುಂಬದ ಸದಸ್ಯರ ವಿವರಗಳು, ಶೈಕ್ಷಣಿಕ ಮಾಹಿತಿ ಮತ್ತು ಇತರ ಅಗತ್ಯ ಅಂಕಿಅಂಶಗಳನ್ನು ಆನ್ಲೈನ್ ಪೋರ್ಟಲ್ ಮೂಲಕ ಸುಲಭವಾಗಿ ಭರ್ತಿ ಮಾಡಬಹುದು.

ರೆಫರೆನ್ಸ್ ಐಡಿ (Reference ID) ಕಡ್ಡಾಯ:
ಆನ್ಲೈನ್ನಲ್ಲಿ ಮಾಹಿತಿ ಸಲ್ಲಿಸಿದ ತಕ್ಷಣ ಸಿಸ್ಟಮ್ನಿಂದ ಒಂದು ರೆಫರೆನ್ಸ್ ಐಡಿ (Reference ID) ಜನರೇಟ್ ಆಗುತ್ತದೆ. ಇದನ್ನು ಸಾರ್ವಜನಿಕರು ಅತ್ಯಂತ ಸುರಕ್ಷಿತವಾಗಿಟ್ಟುಕೊಳ್ಳಬೇಕು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಗಣತಿದಾರರ ಭೇಟಿ ಮತ್ತು ಪರಿಶೀಲನೆ:
ಸ್ವಯಂ ಗಣತಿ ಪೂರ್ಣಗೊಂಡ ನಂತರ, 2026ರ ಏಪ್ರಿಲ್ 16 ರಿಂದ ಮೇ 15 ರವರೆಗೆ ಗಣತಿದಾರರು (Enumerators) ಪ್ರತಿ ಮನೆಗೆ ಭೇಟಿ ನೀಡಲಿದ್ದಾರೆ. ಈ ಸಮಯದಲ್ಲಿ ಸಾರ್ವಜನಿಕರು ತಾವು ಪಡೆದ ರೆಫರೆನ್ಸ್ ಐಡಿಯನ್ನು ಅವರಿಗೆ ನೀಡಬೇಕು. ಗಣತಿದಾರರು ಈ ಐಡಿ ಬಳಸಿ ಮಾಹಿತಿಯನ್ನು ಮೌಲ್ಯೀಕರಿಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತಾರೆ.

”ಡಿಜಿಟಲ್ ಜನಗಣತಿಯು ಪಾರದರ್ಶಕತೆ ಮತ್ತು ನಿಖರತೆಯನ್ನು ಹೆಚ್ಚಿಸುತ್ತದೆ. ನಾಗರಿಕರು ಸ್ವಯಂ ಪ್ರೇರಿತರಾಗಿ ಆನ್ಲೈನ್ ಮೂಲಕ ಮಾಹಿತಿ ನೀಡಿ ರಾಷ್ಟ್ರದ ಅಭಿವೃದ್ಧಿಗೆ ಸಹಕರಿಸಬೇಕು.”
— ಟಿ. ವೆಂಕಟೇಶ್, ಜಿಲ್ಲಾಧಿಕಾರಿಗಳು, ಚಿತ್ರದುರ್ಗ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
