ಸಚಿವ ಎಸ್ಸೆಸ್ಸೆಂ ವಿರುದ್ಧ ಗುಡುಗಿದ ಶಾಸಕ ಬಿ.ಪಿ. ಹರೀಶ್!

ದಾವಣಗೆರೆಯಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ಮಾತನಾಡುತ್ತಿರುವ ಶಾಸಕ ಬಿ.ಪಿ. ಹರೀಶ್.
— ಸದನದಲ್ಲಿ ಸಚಿವರ ಹಗರಣಗಳನ್ನು ಬಯಲಿಗೆಳೆಯುವುದಾಗಿ ಎಚ್ಚರಿಸುತ್ತಿರುವ ಹರಿಹರ ಶಾಸಕ ಬಿ.ಪಿ. ಹರೀಶ್.

—Advertisement—

📍 ದಾವಣಗೆರೆ ದಕ್ಷಿಣ

ಉಪಸಮರ - 2026

ಮಹಾ ಕದನ: ಯಾರಿಗೆ ಒಲಿಯಲಿದೆ ಟಿಕೆಟ್?

Samarth Jabbar Vinay Ajay Yashwanth
ಕ್ಷಣ ಕ್ಷಣದ ಲೈವ್ ಅಪ್ಡೇಟ್ಸ್ ➔

ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ವಿರುದ್ಧ ಹರಿಹರ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಪಿ. ಹರೀಶ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಸಚಿವರ ಆಡಳಿತ ವೈಫಲ್ಯ ಹಾಗೂ ನಡೆದಿರುವ ಹಗರಣಗಳನ್ನು ದಾಖಲೆ ಸಮೇತ ಬಯಲಿಗೆಳೆಯುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

​ದಾವಣಗೆರೆಯಲ್ಲಿ ಶುಕ್ರವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲಾಡಳಿತವು ಹಳಿ ತಪ್ಪಿದ್ದು, ಸಚಿವರ ದುರಾಡಳಿತದಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದರು.

ಸದನದಲ್ಲಿ ನಿರಂತರ ಹೋರಾಟ

​ವಿಧಾನಸಭಾ ಅಧಿವೇಶನದ ಇನ್ನುಳಿದ ಐದು ದಿನಗಳ ಕಾಲ ದಾವಣಗೆರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳು ಮತ್ತು ಸಚಿವರ ವಿರುದ್ಧದ ಆರೋಪಗಳ ಬಗ್ಗೆ ಸದನದಲ್ಲಿ ನಿರಂತರವಾಗಿ ಧ್ವನಿ ಎತ್ತಲಾಗುವುದು. ಸೋಮವಾರದ ಕಲಾಪದಲ್ಲಿ ನನ್ನದೇ ಪ್ರಶ್ನೆ ಇರುವುದರಿಂದ, ಸಚಿವರ ಹಗರಣಗಳನ್ನು ಎಳೆಎಳೆಯಾಗಿ ಬಿಚ್ಚಿಡಲು ಇದು ಸೂಕ್ತ ವೇದಿಕೆಯಾಗಲಿದೆ ಎಂದು ಹರೀಶ್ ತಿಳಿಸಿದರು.

ಕಾರ್ಯಕರ್ತರಿಗೆ ಪ್ರಚಾರದ ಅಸ್ತ್ರ

​”ನಾನು ಸದನದಲ್ಲಿ ಮಂಡಿಸುವ ವಿಷಯಗಳು ಮತ್ತು ಬಯಲಿಗೆಳೆಯುವ ಹಗರಣಗಳನ್ನೇ ಕಾರ್ಯಕರ್ತರು ಮುಂಬರುವ ಚುನಾವಣೆಯಲ್ಲಿ ಪ್ರಚಾರದ ಅಸ್ತ್ರವನ್ನಾಗಿ ಬಳಸಿಕೊಳ್ಳಬೇಕು. ಸಚಿವರ ಭ್ರಷ್ಟಾಚಾರವನ್ನು ಹಳ್ಳಿ ಹಳ್ಳಿಗಳಿಗೆ ತಲುಪಿಸಬೇಕು,” ಎಂದು ಅವರು ಕರೆ ನೀಡಿದರು.

​ಅಧಿವೇಶನ ಮುಗಿದ ತಕ್ಷಣ ತಾವೂ ಕೂಡ ಪೂರ್ಣ ಪ್ರಮಾಣದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಾಗಿ ಅವರು ಸ್ಪಷ್ಟಪಡಿಸಿದರು. ಈ ಮೂಲಕ ಜಿಲ್ಲೆಯಲ್ಲಿ ರಾಜಕೀಯ ಸಂಘರ್ಷ ಮತ್ತಷ್ಟು ಕಾವೇರುವ ಮುನ್ಸೂಚನೆ ಸಿಕ್ಕಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp