ಚಿತ್ರದುರ್ಗ: ಭಕ್ತಿ-ಭಾವದ ಪರಾಕಾಷ್ಠೆ; ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ವೈಭವದ 26ನೇ ವರ್ಷದ ದೀಪೋತ್ಸವ

Author Picture
Published On: January 15, 2026
Chitradurga Ayyappa Swamy Deepotsava 2026

—Advertisement—

ಚಿತ್ರದುರ್ಗ: ಭಕ್ತರು ಭಗವಂತನಿಗೆ ನೀಡುವ ನಿಜವಾದ ಭಕ್ತಿಯೇ ಅವರ ಕಷ್ಟಗಳಿಗೆ ಆಶೀರ್ವಾದದ ರೂಪದಲ್ಲಿ ಪರಿಹಾರ ನೀಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ತಿಳಿಸಿದರು.

ನಗರದ ಮೆದೇಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ (ರಿ.) ವತಿಯಿಂದ ಬುಧವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ 26ನೇ ವರ್ಷದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯದ ಗಮನ ಸೆಳೆದ ದೀಪೋತ್ಸವ

ಕಳೆದ 25 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ದೀಪೋತ್ಸವ ಇಂದು ರಾಜ್ಯದಾದ್ಯಂತ ಖ್ಯಾತಿ ಪಡೆದಿದೆ. ಚಿತ್ರದುರ್ಗವು ಬರೀ ಪ್ರವಾಸಿ ತಾಣವಾಗಿ ಉಳಿಯದೆ, ಧಾರ್ಮಿಕ ಪ್ರವಾಸಿ ಕೇಂದ್ರವಾಗಿಯೂ ಬೆಳೆಯುತ್ತಿದೆ. ಪ್ರತಿದಿನದ ಪೂಜಾ ಕೈಂಕರ್ಯಗಳು ಇಲ್ಲಿನ ದೈವಿಕ ಶಕ್ತಿಯನ್ನು ಹೆಚ್ಚಿಸಿವೆ ಎಂದು ಕೆ.ಎಸ್. ನವೀನ್ ಶ್ಲಾಘಿಸಿದರು.

ಪೋಷಕರಿಗೆ ಮನವಿ: ಮಕ್ಕಳಿಗೆ ಧರ್ಮದ ಅರಿವು ಮೂಡಿಸಿ

ಹಿಂದೂ ಧರ್ಮದ ಉಗಮ ಮತ್ತು ಅದರ ಶಾಂತಿ ಮಂತ್ರದ ಬಗ್ಗೆ ಮಾತನಾಡಿದ ಅವರು, “ನಮ್ಮ ಧರ್ಮ ಎಲ್ಲರ ಒಳಿತಿಗಾಗಿ ಪ್ರಾರ್ಥಿಸುತ್ತದೆ. ಆದರೆ ಇಂದು ಆಧುನಿಕತೆಯ ಹೆಸರಿನಲ್ಲಿ ಮಕ್ಕಳನ್ನು ಧರ್ಮದಿಂದ ವಿಮುಖರನ್ನಾಗಿ ಮಾಡಲಾಗುತ್ತಿದೆ. ಹಿಂದೆ ನಿತ್ಯ ದೇವಸ್ಥಾನಕ್ಕೆ ಹೋಗುವ ಪದ್ಧತಿ ಇತ್ತು, ಅದು ವಾರಕ್ಕೆ, ತಿಂಗಳಿಗೆ ಹಾಗೂ ಈಗ ಕೇವಲ ಹಬ್ಬಗಳಿಗೆ ಸೀಮಿತವಾಗಿದೆ. ಪೋಷಕರು ಇಂತಹ ಧಾರ್ಮಿಕ ಕಾರ್ಯಕ್ರಮಗಳಿಗೆ ಮಕ್ಕಳನ್ನು ಕರೆತರುವ ಮೂಲಕ ಸಂಸ್ಕಾರ ನೀಡಬೇಕು” ಎಂದು ಮನವಿ ಮಾಡಿದರು.

2 ಲಕ್ಷಕ್ಕೂ ಅಧಿಕ ಭಕ್ತರಿಗೆ ಅನ್ನಪ್ರಸಾದ

ಕಾರ್ಯಕ್ರಮವನ್ನು ಉದ್ಘಾಟಿಸಿದ ಐಶ್ವರ್ಯ ಗ್ರೂಪ್ ಆಫ್ ಹೋಟೆಲ್ಸ್ ಮಾಲೀಕ ಅರುಣ್‌ಕುಮಾರ್ ಮಾತನಾಡಿ, “ಗಂಗಾರಾತಿ, ತುಂಗಾರತಿ ಮಾದರಿಯಲ್ಲೇ ಚಿತ್ರದುರ್ಗದ ಈ ದೀಪಾರತಿ ವೈಭವ ಕಾಣುತ್ತಿದೆ. ಕಳೆದ 60 ದಿನಗಳಲ್ಲಿ ಸುಮಾರು 2 ಲಕ್ಷ ಮಾಲಾಧಾರಿಗಳು ಇಲ್ಲಿ ಅನ್ನಪ್ರಸಾದ ಸ್ವೀಕರಿಸಿದ್ದಾರೆ” ಎಂದರು.

ಎಸ್‌ಆರ್‌ಎಸ್ ವಿದ್ಯಾಸಂಸ್ಥೆಯ ಲಿಂಗಾರೆಡ್ಡಿ ಮಾತನಾಡಿ, ಅಯ್ಯಪ್ಪ ಸ್ವಾಮಿಯನ್ನು ನಂಬಿದವರಿಗೆ ಎಂದಿಗೂ ಮೋಸವಿಲ್ಲ. ಮಾಲಾಧಾರಿಗಳು ಕೇವಲ ಮಾಲೆ ಧರಿಸಿದಾಗ ಮಾತ್ರವಲ್ಲದೆ, ವರ್ಷಪೂರ್ತಿ ದುಶ್ಚಟಗಳಿಂದ ದೂರವಿದ್ದು ಭಕ್ತಿಯಿಂದ ಜೀವನ ನಡೆಸಬೇಕು ಎಂದು ಕಿವಿಮಾತು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ. ಬದರೀನಾಥ್ ಮಾತನಾಡಿ, ದೇಶದ ರಕ್ಷಣೆ ಮತ್ತು ಏಳಿಗೆಗಾಗಿ ಪ್ರಧಾನಿ ಮೋದಿಯವರು ಮಾಡುತ್ತಿರುವ ಕಾರ್ಯಗಳನ್ನು ಶ್ಲಾಘಿಸಿದರು. ಉತ್ತರಾಯಣ ಕಾಲದ ಶುಭ ಸಂದರ್ಭದಲ್ಲಿ ನಡೆಯುತ್ತಿರುವ ಇಂತಹ ಕಾರ್ಯಕ್ರಮಗಳು ಸುಗಮವಾಗಿ ಸಾಗಲಿ ಎಂದು ಹಾರೈಸಿದರು.

ಸಂಗೀತ ಸುಧೆ ಮತ್ತು ದೀಪಗಳ ಅಲಂಕಾರ

ಸಮಾರಂಭದಲ್ಲಿ ಹಿನ್ನೆಲೆ ಗಾಯಕರಾದ ಯಶವಂತ್ (ಮಂಗಳೂರು), ನಿತಿನ್ ರಾಜಾರಾಮ್ ಶಾಸ್ತ್ರಿ (ಮೈಸೂರು) ಹಾಗೂ ಕೃಪಾ ಎಸ್. (ಬೆಂಗಳೂರು) ತಂಡದಿಂದ ಭಕ್ತಿ ಸಂಗೀತ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ನಂತರ ಸಾವಿರಾರು ಭಕ್ತರು ಏಕಕಾಲದಲ್ಲಿ ದೀಪಗಳನ್ನು ಹಚ್ಚುವ ಮೂಲಕ ಇಡೀ ಆವರಣವನ್ನು ಜ್ಯೋತಿರ್ಮಯಗೊಳಿಸಿದರು.

ಗಣ್ಯರ ಉಪಸ್ಥಿತಿ: ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷ ಶರಣ್ ಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಹೆಚ್.ಎಂ. ದ್ಯಾಮಣ್ಣ, ವರ್ತಕ ಉದಯ್ ಶೆಟ್ಟಿ, ಡಾ. ಸಿದ್ದಾರ್ಥ್, ಮೆದೇಹಳ್ಳಿ ಗ್ರಾ.ಪಂ ಅಧ್ಯಕ್ಷ ನಿರಂಜನಮೂರ್ತಿ ಸೇರಿದಂತೆ ಟ್ರಸ್ಟ್‌ನ ಪದಾಧಿಕಾರಿಗಳಾದ ಬೆಟ್ಟದ ಮಲ್ಲಪ್ಪ, ಮಲ್ಲಿಕಾರ್ಜುನ, ಎಂ.ಪಿ. ವೆಂಕಟೇಶ್, ಚಂದ್ರಶೇಖರ್ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

madhayakarnatakalive@gmail.com

"ಮಧ್ಯ ಕರ್ನಾಟಕ ಲೈವ್ (Madhyakarnataka.live) ಕರ್ನಾಟಕದ ಹೃದಯಭಾಗದ ನೈಜ, ನಿಖರ ಮತ್ತು ಕ್ಷಣ ಕ್ಷಣದ ಸುದ್ದಿಗಳಿಗಾಗಿ ಮೀಸಲಾದ ಡಿಜಿಟಲ್ ಸುದ್ದಿ ವೇದಿಕೆಯಾಗಿದೆ. ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಮಧ್ಯ ಕರ್ನಾಟಕದ ಜಿಲ್ಲೆಗಳ ಸ್ಥಳೀಯ ಸಮಸ್ಯೆಗಳು, ರಾಜಕೀಯ, ಕೃಷಿ, ಶಿಕ್ಷಣ ಮತ್ತು ಸಾಂಸ್ಕೃತಿಕ ವಿದ್ಯಮಾನಗಳನ್ನು ಜಗತ್ತಿಗೆ ತಲುಪಿಸುವುದು ನಮ್ಮ ಗುರಿ. ನಾವು ಕೇವಲ ಸುದ್ದಿಯನ್ನಷ್ಟೇ ಅಲ್ಲ, ಜನರ ಧ್ವನಿಯಾಗಲು ಬಯಸುತ್ತೇವೆ."… Read More

Related News

Leave a Comment

Home
Web Stories
Instagram
WhatsApp