ಚಿತ್ರದುರ್ಗ: ಜಿಲ್ಲೆಯ ಜೀವನಾಡಿಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ರೈತರ ಉಪವಾಸ ಸತ್ಯಾಗ್ರಹ ತೀವ್ರಗೊಂಡಿದೆ. ಬುಧವಾರಕ್ಕೆ ಸತ್ಯಾಗ್ರಹವು 3ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಮೂವರು ರೈತ ಮುಖಂಡರು ಅಸ್ವಸ್ಥರಾಗಿದ್ದಾರೆ.
ಅಸ್ವಸ್ಥರಾದ್ರೂ ಛಲ ಬಿಡದ ನಾಯಕರು
ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಹಾಗೂ ಮುಖಂಡರಾದ ಸಣ್ಣತಿಮ್ಮಣ್ಣ ಮತ್ತು ಸಣ್ಣೀರಪ್ಪ ಅವರು ಸೋಮವಾರ ರಾತ್ರಿ ತೀವ್ರವಾಗಿ ಅಸ್ವಸ್ಥರಾಗಿದ್ದರು. ಕೂಡಲೇ ಆಂಬುಲೆನ್ಸ್ ಮೂಲಕ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ರಕ್ತದೊತ್ತಡ ಮತ್ತು ಹೃದಯ ಬಡಿತದಲ್ಲಿ ಏರುಪೇರಾಗಿದ್ದರೂ ಸಹ, ಚಿಕಿತ್ಸೆ ಪಡೆದ ನಂತರ ಮಧ್ಯರಾತ್ರಿಯೇ ಧರಣಿ ಸ್ಥಳಕ್ಕೆ ಮರಳಿ ಹೋರಾಟ ಮುಂದುವರಿಸುವ ಮೂಲಕ ತಮ್ಮ ಛಲ ಪ್ರದರ್ಶಿಸಿದ್ದಾರೆ.
ರಂಗಭೂಮಿ ಕಲಾವಿದರ ಸ್ವರ ಸಮ್ಮಿಲನ
ರೈತರ ಈ ನ್ಯಾಯಯುತ ಹೋರಾಟಕ್ಕೆ ಜಿಲ್ಲೆಯ ರಂಗಭೂಮಿ ಕಲಾವಿದರು ಭರ್ಜರಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೆಪಿಎಂ ಗಣೇಶಯ್ಯ, ಎಂ.ಕೆ.ಹರೀಶ್ ಸೇರಿದಂತೆ ಹಲವು ಕಲಾವಿದರು ಧರಣಿ ಸ್ಥಳದಲ್ಲಿ ತಮಟೆ, ಹಾರ್ಮೋನಿಯಂ ಹಿಡಿದು ಕ್ರಾಂತಿ ಗೀತೆಗಳನ್ನು ಹಾಡುವ ಮೂಲಕ ಸ್ಫೂರ್ತಿ ತುಂಬಿದರು. “ಕೇಂದ್ರ ಸರ್ಕಾರ ಬಜೆಟ್ನಲ್ಲಿ ಘೋಷಿಸಿದ್ದ ₹5,300 ಕೋಟಿ ಬಿಡುಗಡೆ ಮಾಡದಿರುವುದು ಜಿಲ್ಲೆಯ ಜನರಿಗೆ ಮಾಡಿದ ದ್ರೋಹ” ಎಂದು ಕಲಾವಿದರು ಆಕ್ರೋಶ ಹೊರಹಾಕಿದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಬರಗಾಲದ ಬರೆ ಮತ್ತು ನೀರಿನ ಪರಿತಪ
ಬಯಲುಸೀಮೆಯ ಚಿತ್ರದುರ್ಗ ಜಿಲ್ಲೆ ಸತತ ಬರಗಾಲದಿಂದ ಕಂಗೆಟ್ಟಿದೆ. ಕುಡಿಯುವ ನೀರಿಗಾಗಿ ಹಳ್ಳಿ ಜನರು ಪರದಾಡುತ್ತಿದ್ದು, ಬೆಳೆಗಳು ಒಣಗಿ ರೈತರ ಬದುಕು ಬೀದಿಗೆ ಬಿದ್ದಿದೆ. “ಜಿಲ್ಲೆಯ ಈ ಸಂಕಷ್ಟಕ್ಕೆ ಭದ್ರಾ ನೀರನ್ನು ತುರ್ತಾಗಿ ಹರಿಸುವುದೇ ಏಕೈಕ ಪರಿಹಾರ” ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಮೀಸೆ ಮಹಾಲಿಂಗಪ್ಪ ಸರ್ಕಾರದ ಗಮನ ಸೆಳೆದರು.
ಎಡಿಸಿ ಭೇಟಿ ಮತ್ತು ಭರವಸೆ
ಧರಣಿ ಆರಂಭವಾಗಿ ಎರಡು ದಿನ ಕಳೆದರೂ ಯಾವುದೇ ಅಧಿಕಾರಿಗಳು ಬಾರದಿದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ ನಂತರ, ಹೆಚ್ಚುವರಿ ಜಿಲ್ಲಾಧಿಕಾರಿ (ADC) ಬಿ.ಟಿ.ಕುಮಾರಸ್ವಾಮಿ ಅವರು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲು ಆಲಿಸಿದರು. ರೈತರ ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಿ, ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂಬ ಭರವಸೆಯನ್ನು ಅವರು ನೀಡಿದ್ದಾರೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
madhayakarnatakalive@gmail.com
