ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಸರ್ಕಾರಿ ನೌಕರರ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಇದೇ ಜನವರಿ 29 ಮತ್ತು 30 ರಂದು ನಡೆಯಲಿರುವ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಉತ್ಸವಕ್ಕೆ ಈ ಬಾರಿ ಸ್ಯಾಂಡಲ್ವುಡ್ ಟಚ್ ಸಿಗಲಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ಸೊಗಡಿನ ಭರ್ಜರಿ ಊಟದ ವ್ಯವಸ್ಥೆಯೂ ಕಾಯುತ್ತಿದೆ!
ಜಿಲ್ಲಾಡಳಿತ, ಜಿ.ಪಂ. ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಅದ್ದೂರಿ ಕಾರ್ಯಕ್ರಮದ ಹೈಲೈಟ್ಸ್ ಇಲ್ಲಿದೆ.
2 ಸಾವಿರಕ್ಕೂ ಹೆಚ್ಚು ನೌಕರರು ಭಾಗಿ: ಕಟ್ಟುನಿಟ್ಟಿನ ರೂಲ್ಸ್! ಈ ಬಾರಿಯ ಕ್ರೀಡಾಕೂಟಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬರೋಬ್ಬರಿ 2045 ನೌಕರರು ಈಗಾಗಲೇ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ. ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದಂತೆ, “ಸ್ಪಾಟ್ ರಿಜಿಸ್ಟ್ರೇಷನ್”ಗೆ ಅವಕಾಶವಿಲ್ಲ. ಯಾರು ಆನ್ಲೈನ್ನಲ್ಲಿ ಹೆಸರು ನೋಂದಾಯಿಸಿದ್ದಾರೋ ಅವರಿಗೆ ಮಾತ್ರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಸ್ಪರ್ಧಿಗಳಿಗೆ ಏನೇನು ಸಿಗುತ್ತೆ?
-
ನೋಂದಾಯಿತ ನೌಕರರಿಗೆ ವಿಶೇಷ ಟೀ-ಶರ್ಟ್ ಮತ್ತು ಕ್ಯಾಪ್.
-
ಭಾಗವಹಿಸುವ ನೌಕರರಿಗೆ 2 ದಿನಗಳ ವಿಶೇಷ ಸಾಂದರ್ಭಿಕ ರಜೆ (OOD).
-
ಗಮನಿಸಿ: ಬರುವಾಗ ಕಡ್ಡಾಯವಾಗಿ ಇಲಾಖೆಯ ಗುರುತಿನ ಚೀಟಿ (ID Card) ಮತ್ತು ಆಧಾರ್ ಕಾರ್ಡ್ ತರಲೇಬೇಕು.
ನೆನಪಿರಲಿ ಪ್ರೇಮ್ ಮತ್ತು ಕಂಬದ ರಂಗಯ್ಯ ಹವಾ ಇದೇ ಮೊದಲ ಬಾರಿಗೆ ನೌಕರರ ಸಂಘದ ಇತಿಹಾಸದಲ್ಲಿ “ಸಂಕ್ರಾಂತಿ ಸಂಭ್ರಮ- ಸುಗ್ಗಿಯ ಸಿರಿ” ಎಂಬ ವಿನೂತನ ಕಾರ್ಯಕ್ರಮವನ್ನು ಜ.29 ರಂದು ಸಂಜೆ 6 ಗಂಟೆಗೆ ಆಯೋಜಿಸಲಾಗಿದೆ.
-
ಈ ಕಾರ್ಯಕ್ರಮದ ಮುಖ್ಯ ಆಕರ್ಷಣೆಯೇ ‘ಲವ್ಲಿ ಸ್ಟಾರ್’ ಪ್ರೇಮ್. ನೆನಪಿರಲಿ ಖ್ಯಾತಿಯ ನಟ ಪ್ರೇಮ್ ವಿಶೇಷ ಅತಿಥಿಯಾಗಿ ಆಗಮಿಸಿ ವೇದಿಕೆಗೆ ಮೆರಗು ನೀಡಲಿದ್ದಾರೆ.
-
ಜೀ-ಕನ್ನಡದ ಸರಿಗಮಪ ಖ್ಯಾತಿಯ ಗಾಯಕ ಕಂಬದ ರಂಗಯ್ಯ ಮತ್ತು ತಂಡದಿಂದ ಅದ್ಭುತ ಸಂಗೀತ ರಸಮಂಜರಿ ಮತ್ತು ನೃತ್ಯ ಕಾರ್ಯಕ್ರಮ ನಡೆಯಲಿದೆ.
ಬಾಯೂರಿಸುವ ಜೋಳದ ರೊಟ್ಟಿ ಊಟ! ನೌಕರರು ಹೆಚ್ಚಾಗಿ ರೈತಾಪಿ ಕುಟುಂಬದಿಂದ ಬಂದವರಾಗಿದ್ದು, ಅವರಿಗೆ ಹಳೆಯ ನೆನಪುಗಳನ್ನು ಮರುಕಳಿಸುವಂತೆ ಮಾಡಲು “ಗ್ರಾಮೀಣ ಸೊಗಡಿನ ಊಟ”ದ ವ್ಯವಸ್ಥೆ ಮಾಡಲಾಗಿದೆ. ಸುಮಾರು 5,000 ಜನರಿಗೆ ಬಿಸಿಬಿಸಿ ಜೋಳದ ರೊಟ್ಟಿ, ಸಜ್ಜೆ ರೊಟ್ಟಿ ಮತ್ತು ಎಣ್ಣೆಗಾಯಿ ಪಲ್ಯದಂತಹ ಖಡಕ್ ಊಟವನ್ನು ಉಚಿತವಾಗಿ ಬಡಿಸಲಾಗುವುದು.
ಈ ಕ್ರೀಡಾ ಹಬ್ಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು, ಎಸ್ಪಿ ಸೇರಿದಂತೆ ಗಣ್ಯರು ಸಾಕ್ಷಿಯಾಗಲಿದ್ದಾರೆ ಎಂದು ಮಾಲತೇಶ್ ಮುದ್ದಜ್ಜಿ ಮಾಹಿತಿ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಖಜಾಂಚಿ ಎ.ಮಲ್ಲಿಕಾರ್ಜುನ, ಉಪಾಧ್ಯಕ್ಷ ಹೆಚ್.ಬಿ.ಪೂಜಾರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
madhayakarnatakalive@gmail.com
