ಚಿತ್ರದುರ್ಗ: ಜಿಲ್ಲಾ ಕೇಂದ್ರದಲ್ಲಿ ಏಪ್ರಿಲ್ ತಿಂಗಳಿನಲ್ಲಿ ಬರುವ ಶ್ರೀ ಬಸವ ಜಯಂತಿ, ಶ್ರೀ ಶಂಕರಾಚಾರ್ಯ ಜಯಂತಿ ಹಾಗೂ ಶ್ರೀ ಭಗೀರಥ ಜಯಂತಿಗಳನ್ನು ಅತ್ಯಂತ ಶ್ರದ್ಧೆ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಈ ಸಂಬಂಧ ಉಪವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಉಪವಿಭಾಗಾಧಿಕಾರಿಗಳು, “ಮಹನೀಯರ ತತ್ವ ಆದರ್ಶಗಳು ಸಮಾಜಕ್ಕೆ ದಾರಿದೀಪವಾಗಿವೆ. ಅವರ ಜಯಂತಿಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಸರ್ಕಾರದ ಶಿಷ್ಟಾಚಾರದಂತೆ ಅರ್ಥಪೂರ್ಣವಾಗಿ ಆಚರಿಸಬೇಕು” ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಯಂತಿ ಆಚರಣೆಗಳ ವೇಳಾಪಟ್ಟಿ ಮತ್ತು ವಿವರ:
1. ಶ್ರೀ ಬಸವ ಜಯಂತಿ (ಏಪ್ರಿಲ್ 20):
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
- ಸಮಯ: ಮಧ್ಯಾಹ್ನ 3:00 ಗಂಟೆಗೆ.
- ಸ್ಥಳ: ನೀಲಕಂಠೇಶ್ವರ ಸಮುದಾಯ ಭವನ, ಹೊಳಲ್ಕೆರೆ ರಸ್ತೆ.
- ಮೆರವಣಿಗೆ: ಸಂಜೆ 4:30ಕ್ಕೆ ನೀಲಕಂಠೇಶ್ವರ ದೇಗುಲದಿಂದ ಆರಂಭವಾಗಿ ಗಾಂಧಿ ವೃತ್ತ, ಆನೆಬಾಗಿಲು, ದೊಡ್ಡಪೇಟೆ ಮಾರ್ಗವಾಗಿ ಸಾಗಲಿದೆ.
- ವಿಶೇಷತೆ: ವಚನ ಗಾಯನ ಮತ್ತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ.
2. ಶ್ರೀ ಶಂಕರಾಚಾರ್ಯ ಜಯಂತಿ (ಏಪ್ರಿಲ್ 21):
- ಸಮಯ: ಬೆಳಿಗ್ಗೆ 11:00 ಗಂಟೆಗೆ.
- ಸ್ಥಳ: ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ.
- ವಿಶೇಷತೆ: ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಹಾಗೂ ಶಂಕರಾಚಾರ್ಯರ ಜೀವನ ಕುರಿತ ಉಪನ್ಯಾಸ.
3. ಶ್ರೀ ಭಗೀರಥ ಜಯಂತಿ (ಏಪ್ರಿಲ್ 23):
- ಸಮಯ: ಬೆಳಿಗ್ಗೆ 11:00 ಗಂಟೆಗೆ.
- ಸ್ಥಳ: ಮಹರ್ಷಿ ವಾಲ್ಮೀಕಿ ಭವನ.
- ಮೆರವಣಿಗೆ: ಕನಕ ವೃತ್ತದಿಂದ ವಾಲ್ಮೀಕಿ ಭವನದವರೆಗೆ ಮೆರವಣಿಗೆ ನಡೆಯಲಿದೆ.
- ವಿಶೇಷತೆ: ಗೀತ ಗಾಯನ ಮತ್ತು ಭಗೀರಥ ಮಹರ್ಷಿಗಳ ಕುರಿತು ವಿಶೇಷ ಮಾತುಗಳು.
ಅಧಿಕಾರಿಗಳಿಗೆ ಪ್ರಮುಖ ಸೂಚನೆಗಳು:
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಿ.ಎಂ. ಗುರುನಾಥ್ ಮಾತನಾಡಿ, ಆಹ್ವಾನ ಪತ್ರಿಕೆ ವಿತರಣೆ ಮತ್ತು ಭಾವಚಿತ್ರಗಳಿಗೆ ಪುಷ್ಪಾಲಂಕಾರದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗುವುದು ಎಂದರು. ಸಭೆಯಲ್ಲಿ ಹಾಜರಿದ್ದ ವಿವಿಧ ಸಮಾಜದ ಮುಖಂಡರು ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ವೀರಶೈವ ಸಮಾಜದ ಅಧ್ಯಕ್ಷ ಎಸ್.ಎಂ.ಎಲ್ ತಿಪ್ಪಣ್ಣ, ಉಪ್ಪಾರ ಸಮಾಜದ ಅಧ್ಯಕ್ಷ ಎನ್. ವೀರೇಶ್, ಬ್ರಾಹ್ಮಣ ಸಂಘದ ಅಧ್ಯಕ್ಷ ಪಿ.ಎಸ್. ಮಂಜುನಾಥ ಸೇರಿದಂತೆ ಹಲವು ಗಣ್ಯರು ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
