ಚಿತ್ರದುರ್ಗ: ವಂಚನೆ ಪ್ರಕರಣದ ಆರೋಪಿ ‘ಖೋಟಾ ನೋಟು ಚಂದ್ರ’ ಹಾಗೂ ಸಹಚರನ ಬಂಧನ

Chitradurga fraud case accused kota Notu Chandra and Roshan Salman photo.
— ಚಿತ್ರದುರ್ಗದ ವಂಚನೆ ಪ್ರಕರಣದ ಆರೋಪಿಗಳಾದ ಚಂದ್ರಶೇಖರ್ ಎನ್. ಅಲಿಯಾಸ್ ಖೋಟಾ ನೋಟು ಚಂದ್ರ ಮತ್ತು ರೋಷನ್ ಸಲ್ಮಾನ್.

—Advertisement—

📍 ದಾವಣಗೆರೆ ದಕ್ಷಿಣ

ಉಪಸಮರ - 2026

ಮಹಾ ಕದನ: ಯಾರಿಗೆ ಒಲಿಯಲಿದೆ ಟಿಕೆಟ್?

Samarth Jabbar Vinay Ajay Yashwanth
ಕ್ಷಣ ಕ್ಷಣದ ಲೈವ್ ಅಪ್ಡೇಟ್ಸ್ ➔

ಚಿತ್ರದುರ್ಗ: ಸಾರ್ವಜನಿಕರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಚಿತ್ರದುರ್ಗದ ಹಾಲಿ ನಗರಸಭಾ ಸದಸ್ಯ ಚಂದ್ರಶೇಖರ್ ಎನ್. ಅಲಿಯಾಸ್ ‘ಖೋಟಾ ನೋಟು ಚಂದ್ರ’ ಹಾಗೂ ಆತನ ಸಹಚರ ರೋಷನ್ ಸಲ್ಮಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಹಿನ್ನೆಲೆ:

ಪೊಲೀಸ್ ಪ್ರಕಟಣೆಯ ಮಾಹಿತಿಯಂತೆ, ಚಿತ್ರದುರ್ಗದ ಫೋರ್ಟ್ ರಸ್ತೆಯ ನಿವಾಸಿಯಾದ ಚಂದ್ರಶೇಖರ್ ಎನ್. (ತಂದೆ ನರಸಿಂಹಲು), ಸಾರ್ವಜನಿಕರಿಂದ ಹಣ ಪಡೆದು ವಂಚಿಸುತ್ತಿದ್ದ ಎನ್ನಲಾದ ದೂರಿನ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಈತನ ವಿರುದ್ಧ ಚಿತ್ರದುರ್ಗ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

ದಾಖಲಾಗಿರುವ ಪ್ರಕರಣಗಳ ವಿವರ (ಪೊಲೀಸ್ ಮಾಹಿತಿ ಅನ್ವಯ):

  • ಚಿತ್ರದುರ್ಗ ನಗರ ಠಾಣೆ: 26 ಪ್ರಕರಣಗಳು

  • ಕೋಟೆ ಪೊಲೀಸ್ ಠಾಣೆ: 04 ಪ್ರಕರಣಗಳು

  • ಬಡಾವಣೆ ಠಾಣೆ: 02 ಪ್ರಕರಣಗಳು ಒಟ್ಟು 32 ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದು, ರಾಜ್ಯದ ಇತರ ಭಾಗಗಳಲ್ಲೂ ದೂರುಗಳು ದಾಖಲಾಗಿವೆ ಎನ್ನಲಾಗಿದೆ.

ಇತ್ತೀಚಿನ ಬೆಳವಣಿಗೆ:

ಚಿತ್ರದುರ್ಗ ನಗರ ಠಾಣೆಯ ಮೊ.ನಂ 34/2026 ರ ಅಡಿಯಲ್ಲಿ ದಾಖಲಾದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ-1 ರೋಷನ್ ಸಲ್ಮಾನ್ ಮತ್ತು ಆರೋಪಿ-3 ಚಂದ್ರಶೇಖರ್ ಎನ್. ಅವರನ್ನು ಪೊಲೀಸರು ಮಾರ್ಚ್ 14, 2026 ರಂದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಘನ ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದೀಗ ಪ್ರಕರಣದ ಹೆಚ್ಚಿನ ತನಿಖೆಗಾಗಿ ಪೊಲೀಸರು ಇವರನ್ನು ತಮ್ಮ ವಶಕ್ಕೆ (Police Custody) ಪಡೆದುಕೊಂಡಿದ್ದಾರೆ.

ಪೊಲೀಸರ ಸೂಚನೆ:

“ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುತ್ತೇವೆ ಎಂದು ಇವರು ಯಾರನ್ನಾದರೂ ನಂಬಿಸಿ ವಂಚಿಸಿದ್ದರೆ, ಕೂಡಲೇ ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ನೀಡಬಹುದು” ಎಂದು ಸಾರ್ವಜನಿಕರಿಗೆ ತಿಳಿಸಲಾಗಿದೆ. ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ರಂಜಿತ್ ಕುಮಾರ್ ಬಂಡಾರು, ಐ.ಪಿ.ಎಸ್. ಅವರು ಶ್ಲಾಘಿಸಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp