ಚಿತ್ರದುರ್ಗ ರೆಡ್‌ಕ್ರಾಸ್ ಶಾಖೆಗೆ ಅಂತರಾಷ್ಟ್ರೀಯ ಗೌರವ: ‘ವಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್’ ಪುರಸ್ಕಾರದ ಗರಿ!

ಚಿತ್ರದುರ್ಗ ರೆಡ್ ಕ್ರಾಸ್ ಸಂಸ್ಥೆಗೆ ಅಂತರಾಷ್ಟ್ರೀಯ ವಲ್ರ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ - Red Cross Chitradurga Award Ceremony.
— ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಸಮಾರಂಭದಲ್ಲಿ ‘ವಲ್ರ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್’ ಪುರಸ್ಕಾರ ಸ್ವೀಕರಿಸುತ್ತಿರುವ ಚಿತ್ರದುರ್ಗ ರೆಡ್ ಕ್ರಾಸ್ ಜಿಲ್ಲಾ ಶಾಖೆಯ ಪದಾಧಿಕಾರಿಗಳು

—Election Update—

ಚಿತ್ರದುರ್ಗ: ಜೀವ ಉಳಿಸುವ ಮಾನವೀಯ ಸೇವೆ ಮತ್ತು ರಕ್ತದಾನ ಅಭಿಯಾನದಲ್ಲಿ ತೋರಿದ ಗಮನಾರ್ಹ ಸಾಧನೆಗಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚಿತ್ರದುರ್ಗ ಜಿಲ್ಲಾ ಶಾಖೆಗೆ ನ್ಯಾಷನಲ್ ಸೋಷಿಯಲ್ ಇಂಪ್ಯಾಕ್ಟ್ ಪ್ರಶಸ್ತಿ ಹಾಗೂ ಅಂತರ ರಾಷ್ಟ್ರೀಯ ಮಟ್ಟದ ‘ವಲ್ರ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್’ ಪುರಸ್ಕಾರ ದೊರೆತಿದೆ.

ಬೆಂಗಳೂರಿನ ಗಾಂಧಿ ಭವನದಲ್ಲಿ ನ್ಯಾಷನಲ್ ಇಂಟಿಗ್ರೇಟೆಡ್ ಫೋರಮ್ ಆಫ್ ಆರ್ಟಿಸ್ಟ್ಸ್ ಅಂಡ್ ಆಕ್ಟಿವಿಸ್ಟ್ಸ್ (ಎನ್‍ಐಎಫ್‍ಎಎ) ವತಿಯಿಂದ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ‘ಸಂವೇದನಾ–2 ರಕ್ತದಾನ ಪ್ರಶಸ್ತಿ ಸಮಾರಂಭ’ದಲ್ಲಿ ಪ್ರಶಂಸಾಪತ್ರ ನೀಡಿ ಗೌರವಿಸಲಾಯಿತು. ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಶಾಖೆಯ ಉಪ ಸಭಾಪತಿ ಅರುಣ್ ಕುಮಾರ್, ಕಾರ್ಯದರ್ಶಿ ಮಜಹರ್ ಉಲ್ಲಾ ಹಾಗೂ ನಿರ್ದೇಶಕ ಎಸ್.ವಿ. ಗುರುಮೂರ್ತಿ ಅವರು ಗಣ್ಯರಿಂದ ಪ್ರಶಸ್ತಿ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕøತ ಡಾ. ಸಿ.ಆರ್. ಚಂದ್ರಶೇಖರ್, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಕುಲಪತಿ ಡಾ. ಗೋವಿಂದಪ್ಪ, ರಾಜ್ಯ ಎನ್‍ಎಸ್‍ಎಸ್ ಅಧಿಕಾರಿ ಡಾ. ಪ್ರತಾಪ್ ಲಿಂಗಯ್ಯ, ಎನ್‍ಐಎಂಎ ರಾಜ್ಯಾಧ್ಯಕ್ಷ ಡಾ. ಸಿದ್ಧಪ್ಪ, ಬಿಎಸ್‍ಎಫ್‍ನ ಡಾ. ಗುರುಮೂರ್ತಿ, ಬೆಂಗಳೂರು ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಎ.ಬಿ. ಶೆಟ್ಟಿ ಹಾಗೂ ವಲ್ರ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್‍ನ ಪ್ರಧಾನ ಕಾರ್ಯದರ್ಶಿ ಅಂಬಾಸಿಡರ್ ಡಾ. ನೀಲಿಮಾ ಉಪಸ್ಥಿತರಿದ್ದರು. ಎನ್‍ಐಎಫ್‍ಎಎ ರಾಷ್ಟ್ರೀಯ ಅಧ್ಯಕ್ಷೆ ಡಾ. ಅಶ್ವಿನಿ ಎಸ್. ಶೆಟ್ಟಿ ಅವರ ಸಮ್ಮುಖದಲ್ಲಿ ಪ್ರಶಸ್ತಿ ವಿತರಿಸಲಾಯಿತು.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp