ಚಿತ್ರದುರ್ಗ: “ಬಲಿಜ ಸಮುದಾಯವು ದಶಕಗಳ ಕಾಲ ಹೋರಾಟ ನಡೆಸಿ 3ಬಿ ವರ್ಗದಡಿ ಮೀಸಲಾತಿಯನ್ನು ಪಡೆದುಕೊಂಡಿದೆ. ಈ ಸೌಲಭ್ಯವನ್ನು ಬಳಸಿಕೊಂಡು ಪೋಷಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು. ಆ ಮೂಲಕ ಸಮಾಜದ ಭವಿಷ್ಯವನ್ನು ಉಜ್ವಲಗೊಳಿಸಬೇಕು” ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷರಾದ ಆರ್. ಶಿವಣ್ಣ ಅವರು ತಿಳಿಸಿದರು.
ನಗರದ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಮಂಗಳವಾರ ಆಯೋಜಿಸಲಾಗಿದ್ದ ಧರ್ಮಯೋಗಿ ನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಮೀಸಲಾತಿಯಿಂದ ಉದ್ಯೋಗಾವಕಾಶ: ಒಕ್ಕಲಿಗ ಮತ್ತು ರೆಡ್ಡಿ ಸಮುದಾಯಗಳ ಜೊತೆಗೂಡಿ ನಡೆಸಿದ ಹೋರಾಟದ ಫಲವಾಗಿ ಇಂದು ಬಲಿಜ ಸಮಾಜಕ್ಕೆ ಮೀಸಲಾತಿ ದೊರೆತಿದೆ. ಇದರಿಂದಾಗಿ ಸಮುದಾಯದ ಯುವಕರಿಗೆ ಸರ್ಕಾರಿ ಉದ್ಯೋಗ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಹೆಚ್ಚಿನ ಅನುಕೂಲಗಳು ಲಭ್ಯವಾಗುತ್ತಿವೆ ಎಂದು ಶಿವಣ್ಣ ಅವರು ಮಾಹಿತಿ ನೀಡಿದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಪವಿತ್ರ ವೃತ್ತಿ ಮತ್ತು ಸಾಮಾಜಿಕ ಬದಲಾವಣೆ: ಕೈವಾರ ಕ್ಷೇತ್ರವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲು ತಾತಯ್ಯನವರ ತತ್ವಗಳೇ ಅಡಿಪಾಯ. ಬಲಿಜ ಸಮಾಜವು ಅನಾದಿಕಾಲದಿಂದಲೂ ನಡೆಸಿಕೊಂಡು ಬರುತ್ತಿರುವ ‘ಬಳೆಗಾರ’ ವೃತ್ತಿಯು ಅತ್ಯಂತ ಪವಿತ್ರವಾದುದು. ಯಾವುದೇ ಮಂಗಳ ಕಾರ್ಯಗಳಲ್ಲಿ ಬಳೆಗಳ ಉಪಸ್ಥಿತಿ ಶುಭ ಸಂಕೇತವಾಗಿದೆ ಎಂದು ಅವರು ಸ್ಮರಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಬಿ.ಎಂ. ಗೋವಿಂದರಾಜು ಅವರು, ಹಿಂದೆ ಕೇವಲ ಬಳೆಗಾರ ವೃತ್ತಿಗೆ ಸೀಮಿತವಾಗಿದ್ದ ಸಮುದಾಯವು ಇಂದು ಶಿಕ್ಷಣದ ಪ್ರಭಾವದಿಂದ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದುತ್ತಿರುವುದು ಹೆಮ್ಮೆಯ ವಿಷಯ ಎಂದು ಸಂತಸ ವ್ಯಕ್ತಪಡಿಸಿದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
madhayakarnatakalive@gmail.com
