ದಾವಣಗೆರೆ: ಜಿಲ್ಲೆಯ ರಾಜಕೀಯದ ‘ಭೀಷ್ಮ’ ಎಂದೇ ಖ್ಯಾತರಾಗಿರುವ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರು ಇಂದು ದಾವಣಗೆರೆ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ಮೂಲಕ ಸಕ್ರಿಯ ರಾಜಕೀಯ ಅಖಾಡಕ್ಕೆ ಅಧಿಕೃತವಾಗಿ ಪ್ರವೇಶಿಸಿದ್ದಾರೆ. ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುವ ಮೊದಲೇ ಅವರು ನಾಮಪತ್ರ ಸಲ್ಲಿಸಿರುವುದು ಜಿಲ್ಲಾ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
ಯುಗಾದಿ-ರಂಜಾನ್ ಶುಭ ದಿನದಂದು ನಾಮಪತ್ರ ಸಲ್ಲಿಕೆ
ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಮರ್ಥ್, “ಇಂದು ಯುಗಾದಿ ಮತ್ತು ರಂಜಾನ್ ಹಬ್ಬಗಳೆರಡೂ ಕೂಡಿ ಬಂದಿರುವ ಅತ್ಯಂತ ಪವಿತ್ರ ದಿನ. ಈ ಶುಭ ಸಂದರ್ಭದಲ್ಲಿ ನಮ್ಮ ಅಜ್ಜ ಶಾಮನೂರು ಶಿವಶಂಕರಪ್ಪ ಹಾಗೂ ನಗರ ದೇವತೆ ದುಗ್ಗಮ್ಮ ತಾಯಿಯನ್ನು ಮನಸ್ಸಿನಲ್ಲಿ ಸ್ಮರಿಸಿ ನಾಮಪತ್ರ ಸಲ್ಲಿಸಿದ್ದೇನೆ,” ಎಂದು ಹರ್ಷ ವ್ಯಕ್ತಪಡಿಸಿದರು.
‘ಟಿಕೆಟ್ ನಮಗೆ ಸಿಗುವುದು 100% ಖಚಿತ’
ಕಾಂಗ್ರೆಸ್ ಪಕ್ಷದಿಂದ ಇನ್ನು ಅಧಿಕೃತವಾಗಿ ಬಿ-ಫಾರಂ ಸಿಗದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಕಾಂಗ್ರೆಸ್ ಪಕ್ಷವನ್ನು ಮಧ್ಯ ಕರ್ನಾಟಕದಲ್ಲಿ ಕಟ್ಟಿ ಬೆಳೆಸಿದ್ದೇ ನಮ್ಮ ಅಜ್ಜ ಶಾಮನೂರು ಶಿವಶಂಕರಪ್ಪನವರು. ಹೈಕಮಾಂಡ್ ಮೇಲೆ ನಮಗೆ ಪೂರ್ಣ ವಿಶ್ವಾಸವಿದೆ. ಟಿಕೆಟ್ ಇಂದು ಅಥವಾ ನಾಳೆ ಸಿಗುವುದು ನೂರಕ್ಕೆ ನೂರರಷ್ಟು ಖಚಿತ. ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಯುವ ಸಮೂಹದ ಬೆಂಬಲ ನಮಗಿದೆ,” ಎಂದು ಆತ್ಮವಿಶ್ವಾಸದಿಂದ ನುಡಿದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಅಜ್ಜನ ನೆನಪು ಮತ್ತು ಜನರ ಆದೇಶ
“ದಾವಣಗೆರೆಯ ಜನತೆ ಅಜ್ಜಾರನ್ನು ‘ಅಪ್ಪಾಜಿ’ ಎಂದೇ ಕರೆಯುತ್ತಾರೆ. ನಾನು ಹೋದಲ್ಲೆಲ್ಲಾ ಜನರು ನನ್ನಲ್ಲಿ ಅಜ್ಜನ ಮುಖಭಾವವನ್ನು ಕಾಣುತ್ತಿದ್ದಾರೆ. ಅವರು ಬಡವರ ಸೇವೆ ಮಾಡಿದ ಹಾದಿಯಲ್ಲೇ ನಾನು ನಡೆಯಬೇಕು ಎಂಬುದು ಜನರ ಆಶಯ ಮತ್ತು ಆದೇಶವಾಗಿದೆ. ಅವರ ಆಶೀರ್ವಾದವೇ ನನಗೆ ದೊಡ್ಡ ಶಕ್ತಿ,” ಎಂದು ಸಮರ್ಥ್ ಭಾವುಕರಾದರು.
ಸರ್ವಧರ್ಮ ಸಮನ್ವಯದ ಮಂತ್ರ
ಕಳೆದ ಒಂದು ತಿಂಗಳಿನಿಂದ ಮುಸ್ಲಿಂ ಸಮುದಾಯದ ಇಫ್ತಾರ್ ಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವ ಬಗ್ಗೆ ಮಾತನಾಡಿದ ಅವರು, “ನಾವೆಲ್ಲರೂ ಅಣ್ಣ-ತಮ್ಮಂದಿರಂತೆ ಬೆಳೆದಿದ್ದೇವೆ. ಅಲ್ಪಸಂಖ್ಯಾತರು ನನ್ನನ್ನು ‘ಮಾವ’ ಎಂದು ಪ್ರೀತಿಯಿಂದ ಕರೆಯುತ್ತಾರೆ. ನಮ್ಮದು ಸರ್ವ ವರ್ಗದವರನ್ನು ಪ್ರೀತಿಸುವ ಮತ್ತು ಗೌರವಿಸುವ ಸಂಸ್ಕೃತಿ,” ಎಂದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
