ದಾವಣಗೆರೆ: 50 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇ ಸೂಪರ್ ವೈಸರ್

Davanagere Lokayukta trap on Survey Supervisor Anjinappa for accepting bribe at Dwarka Lodge.

—Advertisement—

ದಾವಣಗೆರೆ: ಜಿಲ್ಲೆಯ ಚೆನ್ನಗಿರಿ ತಾಲ್ಲೂಕಿನ ADLR (ಸಹಾಯಕ ಭೂಮಾಪನ ನಿರ್ದೇಶಕರು) ಕಚೇರಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ರೈತನ ಜಮೀನು ಹದ್ದುಬಸ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸರ್ವೇ ಸೂಪರ್ ವೈಸರ್ ಅಂಜಿನಪ್ಪ ಈಗ ಲೋಕಾಯುಕ್ತ ಅತಿಥಿಯಾಗಿದ್ದಾರೆ.

ಘಟನೆಯ ವಿವರ:

ಚೆನ್ನಗಿರಿ ADLR ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಜಿನಪ್ಪ, ರೈತರೊಬ್ಬರ ಜಮೀನಿನ ಹದ್ದುಬಸ್ತು ಪ್ರಕ್ರಿಯೆ ಪೂರ್ಣಗೊಳಿಸಲು ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಮೊದಲ ಕಂತಿನ ರೂಪದಲ್ಲಿ 50,000 ರೂಪಾಯಿ ಹಣವನ್ನು ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ದಾಳಿ ನಡೆದ ಸ್ಥಳ:

ದಾವಣಗೆರೆ ನಗರದ ಹಳೆ ಬಸ್ ನಿಲ್ದಾಣದ ಬಳಿ ಇರುವ ದ್ವಾರಕಾ ಲಾಡ್ಜ್‌ನಲ್ಲಿ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ದಾಳಿ ಮಾಡಿದ್ದಾರೆ. ಅಂಜಿನಪ್ಪ ತನ್ನ ಸ್ನೇಹಿತ ಶ್ರೀಧರ್ ಎಂಬುವವರ ಮೂಲಕ ಹಣ ಸ್ವೀಕರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಅಂಜಿನಪ್ಪ ಮತ್ತು ಅವರ ಸ್ನೇಹಿತ ಶ್ರೀಧರ್ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp