ದಾವಣಗೆರೆ: ವರುಣನ ಆರ್ಭಟಕ್ಕೆ ಕಂಗಾಲಾದ ಅನ್ನದಾತ; ನೆಲಕಚ್ಚಿದ ಪಪ್ಪಾಯಿ, ಅಡಿಕೆ ಬೆಳೆ

Papaya and Arecanut crops completely destroyed by heavy rain and strong winds in Jagalur, Davanagere.

—Election Update—

ದಾವಣಗೆರೆ: ಜಿಲ್ಲೆಯಲ್ಲಿ ದಿಢೀರ್ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕೃಷಿ ವಲಯ ತತ್ತರಿಸಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಮುಖ್ಯವಾಗಿ ಪಪ್ಪಾಯಿ ಹಾಗೂ ಅಡಿಕೆ ತೋಟಗಳು ನೆಲಸಮವಾಗಿದ್ದು, ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿ ಕಣ್ಣೀರು ಹಾಕುವಂತಾಗಿದೆ.

ಜಿಲ್ಲೆಯ ಜಗಳೂರು ತಾಲೂಕಿನ ಸಿದ್ದಮ್ಮನಹಳ್ಳಿ ಹಾಗೂ ದೊಣ್ಣೆಹಳ್ಳಿ ಗ್ರಾಮಗಳಲ್ಲಿ ಮಳೆಯ ರೌದ್ರಾವತಾರ ಜೋರಾಗಿತ್ತು. ಈ ಭಾಗದ ರೈತರಾದ ತಿಪ್ಪೇಸ್ವಾಮಿ ಹಾಗೂ ಬಸಪ್ಪ ಎಂಬುವವರಿಗೆ ಸೇರಿದ ಸುಮಾರು 2 ಎಕರೆ ಜಮೀನಿನಲ್ಲಿ ಬೆಳೆದಿದ್ದ ಪಪ್ಪಾಯಿ ಮತ್ತು ಅಡಿಕೆ ಗಿಡಗಳು ಬಿರುಗಾಳಿಯ ರಭಸಕ್ಕೆ ಬುಡಸಮೇತ ಉರುಳಿ ಬಿದ್ದಿವೆ. ಫಸಲು ಬಂದು ಕೈಗೆ ಸೇರುವ ಹಂತದಲ್ಲಿದ್ದ ಬೆಳೆಗಳು ಸಂಪೂರ್ಣ ನಾಶವಾಗಿದ್ದರಿಂದ, ಅನ್ನದಾತನಿಗೆ ಅಪಾರ ಪ್ರಮಾಣದ ಆರ್ಥಿಕ ಹೊಡೆತ ಬಿದ್ದಿದೆ.

ಶಾಲಾ ಕಟ್ಟಡದ ಮೇಲೆ ಬಿದ್ದ ಬೃಹತ್ ಮರ

ಮಳೆಯ ಆರ್ಭಟ ಕೇವಲ ಕೃಷಿ ಭೂಮಿಗೆ ಮಾತ್ರ ಸೀಮಿತವಾಗಿರದೆ ಸಾರ್ವಜನಿಕ ಆಸ್ತಿಪಾಸ್ತಿಗೂ ಹಾನಿ ಮಾಡಿದೆ. ತಾಲೂಕಿನ ಉದ್ದಘಟ್ಟ ಗ್ರಾಮದ ಸರ್ಕಾರಿ ಶಾಲೆಯ ಕೊಠಡಿಯ ಮೇಲೆ ಭಾರಿ ಗಾತ್ರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮವಾಗಿ ಶಾಲಾ ಕೊಠಡಿಯ ಮೇಲ್ಛಾವಣಿಯ ಶೀಟ್‌ಗಳು ಸಂಪೂರ್ಣವಾಗಿ ಒಡೆದು ಪುಡಿಯಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಪರಿಹಾರಕ್ಕೆ ರೈತರ ಆಗ್ರಹ:

“ವರ್ಷವಿಡೀ ಕಷ್ಟಪಟ್ಟು ಸಾಲಸೋಲ ಮಾಡಿ ಬೆಳೆ ಬೆಳೆದಿದ್ದೆವು. ಆದರೆ ಒಂದೇ ದಿನದ ಮಳೆ ನಮ್ಮ ಬದುಕನ್ನು ಬೀದಿಗೆ ತಂದಿದೆ,” ಎಂದು ನೊಂದ ರೈತರು ಅಳಲು ತೋಡಿಕೊಂಡಿದ್ದಾರೆ. ತೋಟಗಾರಿಕಾ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಕೂಡಲೇ ಜಂಟಿ ಸಮೀಕ್ಷೆ ನಡೆಸಿ, ನಷ್ಟದ ವರದಿ ಸಿದ್ಧಪಡಿಸಿ ನೊಂದ ರೈತರಿಗೆ ಸೂಕ್ತ ಜೀವರಕ್ಷಕ ಪರಿಹಾರ ನೀಡಬೇಕು ಎಂದು ಸ್ಥಳೀಯರು ಹಾಗೂ ರೈತ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp