ದಾವಣಗೆರೆ ನಗರದ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ: ಯಾವೆಲ್ಲಾ ಪ್ರದೇಶಗಳಲ್ಲಿ ಪವರ್ ಕಟ್?

Davanagere BESCOM official power cut notification letter

—Election Update—

ದಾವಣಗೆರೆ: ನಗರದ ಪ್ರಮುಖ ವಾಣಿಜ್ಯ ಮತ್ತು ವಸತಿ ಬಡಾವಣೆಗಳ ಜನತೆಗೆ ಬೆಸ್ಕಾಂ (BESCOM) ಮಹತ್ವದ ಮಾಹಿತಿಯೊಂದನ್ನು ನೀಡಿದೆ. 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 22 ರಂದು ನಗರದ ಹಲವೆಡೆ ದಿನವಿಡೀ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಯಾವ ಸಮಯದಲ್ಲಿ ಪವರ್ ಕಟ್?

ಬೆಸ್ಕಾಂ ಪ್ರಕಟಣೆಯ ಪ್ರಕಾರ, ಮೇ 22 ರಂದು ಬೆಳಿಗ್ಗೆ 09:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ (ಒಟ್ಟು 8 ಗಂಟೆಗಳ ಕಾಲ) ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ.

ವಿದ್ಯುತ್ ವ್ಯತ್ಯಯವಾಗಲಿರುವ ಪ್ರಮುಖ ಪ್ರದೇಶಗಳು:

  • ಎಫ್-21 ಶ್ರೀ ಸಾಯಿ ಫೀಡರ್ ವ್ಯಾಪ್ತಿ:
    ಎಸ್.ಎಸ್. ಲೇಔಟ್ ‘ಎ’ ಬ್ಲಾಕ್, ಅಥಣಿ ಕಾಲೇಜು, ಎಂ.ಬಿ.ಎ ಕಾಲೇಜು, ಶಾಮನೂರು ರಸ್ತೆ, ಗ್ಲಾಸ್ ಹೌಸ್ ಸುತ್ತಮುತ್ತಲಿನ ಪ್ರದೇಶ, ಕುಂದವಾಡ ಕೆರೆ ರಸ್ತೆ, ಬಸವನಗುಡಿ, ಸಿದ್ದವೀರಪ್ಪ ಬಡಾವಣೆ, ಲಕ್ಷ್ಮಿ ಫ್ಲೋರ್ ಮಿಲ್ ಹಾಗೂ ಇದರ ಆಸುಪಾಸಿನ ಜಾಗಗಳು.
  • ಎಫ್-16 ಎಸ್.ನಿಜಲಿಂಗಪ್ಪ ಫೀಡರ್ ವ್ಯಾಪ್ತಿ:
    ನಿಜಲಿಂಗಪ್ಪ ಲೇಔಟ್, ದೇವರಾಜ್ ಅರಸ್ ಲೇಔಟ್ ‘ಎ’ ಬ್ಲಾಕ್, ವಿನಾಯಕ ರಸ್ತೆ, ಯಲ್ಲಮ್ಮ ನಗರ, ಶಾಂತಿನಗರ, ವಿನೋಬನಗರ 4ನೇ ಮೇನ್ ರಸ್ತೆ ಹಾಗೂ ಸುತ್ತಮುತ್ತಲಿನ ಬಡಾವಣೆಗಳು.

ಬೆಸ್ಕಾಂ ಮನವಿ: ಫೀಡರ್‌ಗಳಲ್ಲಿ ತುರ್ತು ಮತ್ತು ಅಗತ್ಯ ದುರಸ್ತಿ ಕೆಲಸಗಳು ನಡೆಯುತ್ತಿರುವುದರಿಂದ ಸಾರ್ವಜನಿಕರು ಹಾಗೂ ವಾಣಿಜ್ಯ ಸಂಸ್ಥೆಗಳ ಮಾಲೀಕರು ಬೆಸ್ಕಾಂ ಸಿಬ್ಬಂದಿಯೊಂದಿಗೆ ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿದ್ಯುತ್) ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ. ಕಾಮಗಾರಿ ಬೇಗ ಮುಗಿದಲ್ಲಿ ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ತಿಳಿಸಲಾಗಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp