ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ಉಪಚುನಾವಣೆ ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಕೆರಳಿಸಿದೆ. ಉಪಚುನಾವಣೆಯ ಟಿಕೆಟ್ಗಾಗಿ ಶಾಮನೂರು ಕುಟುಂಬ ಮತ್ತು ಕಾಂಗ್ರೆಸ್ ಹೈಕಮಾಂಡ್ ನಡುವೆ ತೀವ್ರ ಹಗ್ಗಜಗ್ಗಾಟ ಶುರುವಾಗಿದ್ದು, ಅಲ್ಪಸಂಖ್ಯಾತ ನಾಯಕರು ಸಹ ಟಿಕೆಟ್ಗಾಗಿ ಪಟ್ಟು ಹಿಡಿದಿದ್ದಾರೆ. ಈ ಬಾರಿಯ ಟಿಕೆಟ್ ಯಾರ ಪಾಲಾಗಲಿದೆ ಎಂಬ ಸಂಪೂರ್ಣ ಮಾಹಿತಿಯ ಎಕ್ಸ್ಕ್ಲೂಸಿವ್ ವರದಿ ಇಲ್ಲಿದೆ.
ಮುಸ್ಲಿಂ ನಾಯಕರ ಬಿಗಿಪಟ್ಟು: ಜಮೀರ್ ಅಹಮದ್ ರಣತಂತ್ರ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಲೇಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಮತ್ತು ವಿಧಾನ ಪರಿಷತ್ ಸದಸ್ಯ ಜಬ್ಬಾರ್ ಹೈಕಮಾಂಡ್ ಮುಂದೆ ಬಿಗಿಪಟ್ಟು ಹಿಡಿದಿದ್ದಾರೆ. ಈ ಹಿಂದೆ ಸ್ವತಃ ಶಾಮನೂರು ಶಿವಶಂಕರಪ್ಪನವರೇ ತಮ್ಮ ನಂತರ ಈ ಕ್ಷೇತ್ರವನ್ನು ಅಲ್ಪಸಂಖ್ಯಾತರಿಗೆ ಬಿಟ್ಟುಕೊಡುವುದಾಗಿ ಭರವಸೆ ನೀಡಿದ್ದರು ಎಂಬ ವಿಚಾರವನ್ನು ಮುಂದಿಟ್ಟುಕೊಂಡು ಮುಸ್ಲಿಂ ನಾಯಕರು ಲಾಬಿ ನಡೆಸುತ್ತಿದ್ದಾರೆ.
ದಾವಣಗೆರೆ ದಕ್ಷಿಣ ಉಪಚುನಾವಣೆ: ಶಾಮನೂರು ಕುಟುಂಬಕ್ಕೆ ಟಿಕೆಟ್ ಕಷ್ಟವೇಕೆ?
ಈಗಾಗಲೇ ಶಾಮನೂರು ಕುಟುಂಬದಲ್ಲಿ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸಚಿವರಾಗಿದ್ದಾರೆ ಮತ್ತು ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಸಂಸದರಾಗಿದ್ದಾರೆ. ಇದೀಗ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಮ್ಮ ಮಗನಿಗೆ (ಶಾಮನೂರು ಶಿವಶಂಕರಪ್ಪನವರ ಮೊಮ್ಮಗ) ಟಿಕೆಟ್ ನೀಡುವಂತೆ ಒತ್ತಡ ಹೇರುತ್ತಿದ್ದಾರೆ. ಆದರೆ, ಒಂದೇ ಕುಟುಂಬಕ್ಕೆ ಮೂರನೇ ಸ್ಥಾನಮಾನ ನೀಡಿದರೆ ಪಕ್ಷದೊಳಗೆ ಮತ್ತು ಕ್ಷೇತ್ರದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುವ ಜೊತೆಗೆ, ಕುಟುಂಬ ರಾಜಕಾರಣದ ಆರೋಪ ಕಾಂಗ್ರೆಸ್ಗೆ ತಿರುಗೇಟು ನೀಡುವ ಸಾಧ್ಯತೆ ಇದೆ ಎಂದು ಹೈಕಮಾಂಡ್ ಆತಂಕ ವ್ಯಕ್ತಪಡಿಸಿದೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ರಹಸ್ಯ ಸಭೆ: ಸಿಎಂಗೆ ಸುರ್ಜೇವಾಲಾ ನೀಡಿದ ಟಾಸ್ಕ್ ಏನು? ಇತ್ತೀಚೆಗೆ ಜಕ್ಕೂರು ಏರೋಡ್ರೋಮ್ನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನಡುವೆ ಬರೋಬ್ಬರಿ 40 ನಿಮಿಷಗಳ ಕಾಲ ಮಹತ್ವದ ಚರ್ಚೆ ನಡೆದಿದೆ.
-
ಒಂದು ವೇಳೆ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಫೈನಲ್ ಆದರೆ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಸಮಾಧಾನಪಡಿಸುವ ಹೊಣೆಯನ್ನು ಸಿಎಂ ಸಿದ್ದರಾಮಯ್ಯನವರಿಗೆ ಸುರ್ಜೇವಾಲಾ ವಹಿಸಿದ್ದಾರೆ.
-
ಟಿಕೆಟ್ ಯಾರಿಗೇ ಕೊಟ್ಟರೂ ದಾವಣಗೆರೆ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳನ್ನೂ ಪ್ರತಿಷ್ಠೆಯಾಗಿ ತೆಗೆದುಕೊಂಡು ಗೆಲ್ಲಲೇಬೇಕು ಎಂದು ಹೈಕಮಾಂಡ್ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಹಿಂದೂ-ಮುಸ್ಲಿಂ ಧ್ರುವೀಕರಣದ ಆತಂಕ! ಒಂದು ವೇಳೆ ಕಾಂಗ್ರೆಸ್ ಮುಸ್ಲಿಂ ಅಭ್ಯರ್ಥಿಗೆ ಮಣೆ ಹಾಕಿದರೆ, ಬಿಜೆಪಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕ್ಷೇತ್ರದಲ್ಲಿ ‘ಹಿಂದೂ-ಮುಸ್ಲಿಂ ಧ್ರುವೀಕರಣ’ ಮಾಡುವ ಮೂಲಕ ಲಾಭ ಪಡೆಯುವ ಸಾಧ್ಯತೆಯನ್ನು ಕೂಡ ಹೈಕಮಾಂಡ್ ಲೆಕ್ಕಾಚಾರ ಹಾಕುತ್ತಿದೆ. ಶಾಮನೂರು ಕುಟುಂಬದ ಸಂಪೂರ್ಣ ಬೆಂಬಲವಿದ್ದರೆ ಮಾತ್ರ ಮುಸ್ಲಿಂ ಅಭ್ಯರ್ಥಿ ಗೆಲ್ಲುವುದು ಸಾಧ್ಯ ಎಂಬುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರವಾಗಿದೆ
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
madhayakarnatakalive@gmail.com
