ಹರಿಹರ: ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಆರ್ಥಿಕ ವ್ಯವಹಾರಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿರುವ ಪ್ರಶ್ನೆಗಳಿಗೆ ಉತ್ತರ ನೀಡಲು ಪೀಠದ ಟ್ರಸ್ಟ್ ಮಹತ್ವದ ತೀರ್ಮಾನ ಕೈಗೊಂಡಿದೆ. ಏಪ್ರಿಲ್ 27ರಂದು (ಸೋಮವಾರ) ಇಂದು ಬೆಳಿಗ್ಗೆ 11 ಗಂಟೆಗೆ ಮಠದ ಆವರಣದಲ್ಲಿ ಬಹಿರಂಗ ಸಭೆ ಕರೆದಿದ್ದು, ಪೀಠದ ಸಂಪೂರ್ಣ ಲೆಕ್ಕಪತ್ರಗಳನ್ನು ಸಮಾಜದ ಮುಂದೆ ಮಂಡಿಸಲಾಗುವುದು ಎಂದು ಟ್ರಸ್ಟ್ನ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ತಿಳಿಸಿದ್ದಾರೆ.
ವಿವಾದದ ಹಿನ್ನೆಲೆ:
ಕಳೆದ ಕೆಲವು ದಿನಗಳಿಂದ ಹರಿಹರ ಪೀಠದ ಅನುದಾನ ದುರ್ಬಳಕೆ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ವಚನಾನಂದ ಸ್ವಾಮೀಜಿಯವರ ಪದಚ್ಯುತಿ ಮತ್ತು ‘ಲೆಕ್ಕ ಕೊಡಿ’ ಅಭಿಯಾನವು ಭಕ್ತರಲ್ಲಿ ಸಾಕಷ್ಟು ಗೊಂದಲ ಮೂಡಿಸಿತ್ತು. ಈ ಗೊಂದಲಗಳಿಗೆ ಇತಿಶ್ರೀ ಹಾಡಲು ಟ್ರಸ್ಟ್ ಈ ನಿರ್ಧಾರಕ್ಕೆ ಬಂದಿದೆ.
ವರದಿಯ ಮುಖ್ಯಾಂಶಗಳು:
ಅವಧಿ: 2008 ರಿಂದ 2026 ರವರೆಗಿನ ಒಟ್ಟು 18 ವರ್ಷಗಳ ಸುದೀರ್ಘ ಲೆಕ್ಕಪತ್ರ ಮಂಡನೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ವಿವರಗಳು: ಮಠಕ್ಕೆ ಬಂದ ಸರ್ಕಾರಿ ಅನುದಾನ, ಭಕ್ತರು ನೀಡಿದ ದೇಣಿಗೆ, ಆಸ್ತಿ ವಿವರ ಹಾಗೂ ಮಠದ ಅಭಿವೃದ್ಧಿ ಕಾರ್ಯಗಳಿಗೆ ಮಾಡಲಾದ ಖರ್ಚುಗಳ ಪ್ರತಿಯೊಂದು ವಿವರವನ್ನು ಸಾರ್ವಜನಿಕವಾಗಿ ಇಡಲಾಗುವುದು.
ಆಹ್ವಾನ: ಲೆಕ್ಕಪತ್ರ ಕೇಳಿದವರು, ಸಮಾಜದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಭಕ್ತರಿಗೆ ಸಭೆಗೆ ಹಾಜರಾಗಲು ಮುಕ್ತ ಆಹ್ವಾನ ನೀಡಲಾಗಿದೆ.
ಉದ್ದೇಶ: “ನಾವು ಮೊದಲಿನಿಂದಲೂ ಪಾರದರ್ಶಕತೆ ಕಾಯ್ದುಕೊಂಡಿದ್ದೇವೆ. ಕೆಲವರು ವಿನಾಕಾರಣ ಗೊಂದಲ ಸೃಷ್ಟಿಸುತ್ತಿರುವುದರಿಂದ ಸತ್ಯಾಸತ್ಯತೆ ತಿಳಿಸಲು ಈ ಸಭೆ ಆಯೋಜಿಸಲಾಗಿದೆ” ಎಂದು ಉಮಾಪತಿ ಸ್ಪಷ್ಟಪಡಿಸಿದ್ದಾರೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
