ಹರಿಹರ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಇತ್ತೀಚೆಗೆ ಉಚ್ಚಾಟನೆಗೊಂಡಿರುವ ವಚನಾನಂದ ಸ್ವಾಮೀಜಿ ವಿರುದ್ಧದ ಪೋಕ್ಸೋ (POCSO) ಪ್ರಕರಣದ ತನಿಖೆ ತೀವ್ರಗೊಂಡಿದೆ. ಈ ದೌರ್ಜನ್ಯದ ಆರೋಪಕ್ಕೆ ಸಂಬಂಧಿಸಿದಂತೆ ಸ್ವಾಮೀಜಿ ಅವರು ಇಂದು ಬೆಳಗ್ಗೆ 10 ಗಂಟೆಗೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂರನೇ ಬಾರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಮಠದ ವಸತಿ ನಿಲಯದಲ್ಲಿದ್ದ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಲೈಂಗಿಕ ಶೋಷಣೆ ಹಾಗೂ ದೈಹಿಕ ಕಿರುಕುಳ ನೀಡಿದ ಗಂಭೀರ ಆರೋಪ ಸ್ವಾಮೀಜಿ ಮೇಲಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಶ್ರೀಗಳ ನಿರೀಕ್ಷಣಾ ಜಾಮೀನು ರದ್ದುಪಡಿಸಲು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಗದಗದಿಂದ ಹರಿಹರಕ್ಕೆ ವರ್ಗಾವಣೆಯಾದ ಪ್ರಕರಣ
ಮಠದ ಹಾಸ್ಟೆಲ್ ಬಾಲಕನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಸಂತ್ರಸ್ತ ಬಾಲಕನ ಪೋಷಕರು ಮೊದಲು ಗದಗದ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಲ್ಲಿ ಶೂನ್ಯ ಎಫ್ಐಆರ್ (Zero FIR) ದಾಖಲಿಸಿಕೊಳ್ಳಲಾಗಿತ್ತು. ಆದರೆ, ಆರೋಪಿತ ಘಟನೆ ನಡೆದಿರುವ ಸ್ಥಳ ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವುದರಿಂದ ಪ್ರಕರಣವನ್ನು ಮುಂದಿನ ತನಿಖೆಗಾಗಿ ಹರಿಹರಕ್ಕೆ ವರ್ಗಾಯಿಸಲಾಯಿತು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಸಿಪಿಐ ಸುರೇಶ್ ಸಗರಿ ನೇತೃತ್ವದಲ್ಲಿ ಗ್ರಿಲ್
ಇಂದು ನಡೆಯಲಿರುವ ಮೂರನೇ ಹಂತದ ವಿಚಾರಣೆಯನ್ನು ಸಿಪಿಐ ಸುರೇಶ್ ಸಗರಿ ಹಾಗೂ ಪಿಎಸ್ಐ ಜಯರತ್ನಮ್ಮ ಅವರ ನೇತೃತ್ವದ ಪೊಲೀಸ್ ತಂಡ ನಡೆಸಲಿದೆ. ಈಗಾಗಲೇ ಹಿಂದಿನ ವಿಚಾರಣೆ ವೇಳೆ ಪೊಲೀಸರು ಸ್ವಾಮೀಜಿಯನ್ನು ಸುದೀರ್ಘವಾಗಿ ಪ್ರಶ್ನಿಸಿದ್ದು, ವೈದ್ಯಕೀಯ ಪರೀಕ್ಷೆಗೂ ಒಳಪಡಿಸಿದ್ದಾರೆ. ಉಗುರು, ಕೂದಲು ಹಾಗೂ ಬಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ.

ಜಾಮೀನು ರದ್ದುಗೊಳಿಸಲು ಪೊಲೀಸರ ಅರ್ಜಿ
ವಚನಾನಂದ ಸ್ವಾಮೀಜಿ ಅವರು ಈಗಾಗಲೇ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ. ಆದರೆ ಪ್ರಕರಣದ ಗಾಂಭೀರ್ಯತೆಯನ್ನು ಪರಿಗಣಿಸಿ, ತನಿಖೆಗೆ ಸ್ವಾಮೀಜಿಯವರನ್ನು ವಶಕ್ಕೆ ಪಡೆಯುವ ಅಗತ್ಯವಿರುವುದರಿಂದ ಅವರ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಪೊಲೀಸರು ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯದ ನಿರ್ಧಾರದ ಮೇಲೆ ಸ್ವಾಮೀಜಿಯವರ ಬಂಧನದ ಭವಿಷ್ಯ ನಿರ್ಧಾರವಾಗಲಿದೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
