ಹೊನ್ನಾಳಿ: ದೇಶ ಸೇವೆಗಾಗಿ ತಮ್ಮ ಯೌವನ ಮತ್ತು ಬದುಕನ್ನೇ ಮುಡಿಪಾಗಿಟ್ಟ ವೀರ ಸೈನಿಕರ ಸೇವೆ ಸದಾ ಸ್ಮರಣೀಯ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.
ಭಾನುವಾರ ಹೊನ್ನಾಳಿ ತಾಲೂಕಿನ ದೇವನಾಯಕನಹಳ್ಳಿಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ 11ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ಸೈನಿಕರೇ ದೇಶದ ಅಸ್ತಿತ್ವ:
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, “ಗಡಿಯಲ್ಲಿ ಸೈನಿಕರು ಹಗಲಿರುಳು ಜಾಗರೂಕರಾಗಿರುವುದರಿಂದಲೇ ನಾವಿಂದು ನೆಮ್ಮದಿಯ ಜೀವನ ನಡೆಸುತ್ತಿದ್ದೇವೆ. ಮಾಜಿ ಸೈನಿಕರು ನಿವೃತ್ತರಾದರೂ ಸಮಾಜಕ್ಕೆ ಶಕ್ತಿಯಾಗಿ ನಿಲ್ಲುತ್ತಾರೆ. ಅವರ ಶಿಸ್ತು ಮತ್ತು ದೇಶಪ್ರೇಮ ಯುವ ಪೀಳಿಗೆಗೆ ಮಾದರಿ” ಎಂದರು. ಇದೇ ಸಂದರ್ಭದಲ್ಲಿ ಅವರು ಅವಳಿ ತಾಲೂಕಿನ ಅನೇಕ ಮಾಜಿ ಸೈನಿಕರನ್ನು ಅತ್ಯಂತ ವಿಜೃಂಭಣೆಯಿಂದ ಸನ್ಮಾನಿಸಿ ಗೌರವಿಸಿದರು.
ಸಂಭ್ರಮದ ವಾರ್ಷಿಕೋತ್ಸವ:
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ದೇವನಾಯಕನಹಳ್ಳಿಯ ಸರ್ಕಾರಿ ನೌಕರರ ಭವನದಲ್ಲಿ ನಡೆದ ಈ ಸಮಾರಂಭದಲ್ಲಿ ಹೊನ್ನಾಳಿ ಮತ್ತು ನ್ಯಾಮತಿಯ ನೂರಾರು ಮಾಜಿ ಸೈನಿಕರು ಹಾಗೂ ಅವರ ಕುಟುಂಬಸ್ಥರು ಭಾಗವಹಿಸಿದ್ದರು. ಸಂಘದ ವತಿಯಿಂದ ಕಳೆದ 11 ವರ್ಷಗಳಿಂದ ನಡೆಯುತ್ತಿರುವ ಜನಪರ ಕಾರ್ಯಗಳನ್ನು ಶಾಸಕರು ಶ್ಲಾಘಿಸಿದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
