ಚಿತ್ರದುರ್ಗ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಚಿತ್ರದುರ್ಗ ಹಾಗೂ ಜಾನಪದ ಸಿರಿಯಜ್ಜಿ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆ ಚಳ್ಳಕೆರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಇದೇ ಬರುವ ಮಾರ್ಚ್ 24, 2026 ರಂದು ಒಂದು ದಿನದ ವಿಶೇಷ ವಿಚಾರಸಂಕಿರಣವನ್ನು ಆಯೋಜಿಸಲಾಗಿದೆ.
‘ಕನ್ನಡ ಪಠ್ಯಕ್ರಮ ಬೋಧನಾ ಕೌಶಲ್ಯ ಮತ್ತು ಕನ್ನಡ ಬಳಕೆ’ ಎಂಬ ವಿಷಯದ ಕುರಿತು ನಡೆಯಲಿರುವ ಈ ಕಾರ್ಯಕ್ರಮವು ನಗರದ ಸರ್ಕಾರಿ ಕಲಾ ಕಾಲೇಜಿನ ಅಂಬೇಡ್ಕರ್ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ವಿವರಗಳು:
- ಉದ್ಘಾಟನೆ: ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯರೂ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಯಪ್ಪ ಮಾಳಿಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
- ಅಧ್ಯಕ್ಷತೆ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರೊ. ಎ.ಬಿ. ರಾಮಚಂದ್ರಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
- ಆಶಯ ನುಡಿ: ಪತ್ರಕರ್ತರು ಹಾಗೂ ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ಶ್ರೀ ಚಿಕ್ಕಪ್ಪನಹಳ್ಳಿ ಷಣ್ಮುಖಪ್ಪ ಅವರು ಆಶಯ ನುಡಿಗಳನ್ನಾಡಲಿದ್ದಾರೆ.
ವಿಶೇಷ ಉಪನ್ಯಾಸಗಳು:
ವಿಚಾರಸಂಕಿರಣದಲ್ಲಿ ಪ್ರಮುಖವಾಗಿ ಎರಡು ವಿಷಯಗಳ ಮೇಲೆ ತಜ್ಞರು ಬೆಳಕು ಚೆಲ್ಲಲಿದ್ದಾರೆ:
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
- ಕನ್ನಡ ಕಾವ್ಯ ಪರಂಪರೆ: ಭಾಷಾ ಪ್ರಯೋಗಶೀಲತೆ – ಉಪನ್ಯಾಸ ನೀಡುವವರು: ಡಾ. ಮಹಾಂತೇಶ ಪಾಟೀಲ, ದಾವಣಗೆರೆ ವಿಶ್ವವಿದ್ಯಾಲಯ.
- ಕನ್ನಡ ಭಾಷೆಯ ಬಳಕೆಯ ನೆಲೆಗಳು – ಉಪನ್ಯಾಸ ನೀಡುವವರು: ಡಾ. ಟಿ. ಗಾಯತ್ರಮ್ಮ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಚಿತ್ರದುರ್ಗ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಬಿ.ಎಂ. ಗುರುನಾಥ್, ಸಾಹಿತಿಗಳಾದ ಡಾ. ವೇದಾಂತ ವಿಲಂಜ, ಡಾ. ಸಿದ್ಧಯ್ಯ ಉಪ್ಪಾರಹಟ್ಟಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಶ್ರೀ ಸಂತೋಷ್ ಹಾನಗಲ್ಲು ಅವರು ಎಲ್ಲರನ್ನೂ ಸ್ವಾಗತಿಸಲಿದ್ದಾರೆ.

ಕನ್ನಡ ಬೋಧನೆಯಲ್ಲಿ ಆಧುನಿಕ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವ ಮತ್ತು ದೈನಂದಿನ ಜೀವನದಲ್ಲಿ ಕನ್ನಡದ ಸೃಜನಶೀಲ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
