ದಾವಣಗೆರೆ: “ಅವತ್ತು ಬಿಜೆಪಿ ಬಗ್ಗೆ ಏನೇನು ಮಾತಾಡಿದ್ದಿರಿ ಎಂಬುದು ನೆನಪಿದೆಯೇ? ಅಧಿಕಾರಕ್ಕಾಗಿ ಸಿದ್ಧಾಂತ ಗಾಳಿಗೆ ತೂರಿದ ನಿಮಗೆ ಮಾತನಾಡುವ ಯಾವ ನೈತಿಕತೆ ಇದೆ?” – ಹೀಗೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರ ವಿರುದ್ಧ ದಾವಣಗೆರೆಯಲ್ಲಿ ಗುಡುಗಿದ್ದಾರೆ.
ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳು ಮಾಧ್ಯಮಗಳೊಂದಿಗೆ ಮಾತನಾಡುವಾಗ, ಬಿಜೆಪಿ ನಾಯಕ ಚಲವಾದಿ ನಾರಾಯಣಸ್ವಾಮಿ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಇತ್ತೀಚಿನ ಹೇಳಿಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಚಲವಾದಿ ನಾರಾಯಣಸ್ವಾಮಿ ವಿರುದ್ಧ ಕಿಡಿ
ಕಾಂಗ್ರೆಸ್ ಗೆಲುವು ಮುಸ್ಲಿಂ ಸ್ವಾಭಿಮಾನದ ಸೋಲು ಎಂಬ ಚಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಸಿಎಂ, “ಚಲವಾದಿ ನಾರಾಯಣಸ್ವಾಮಿ ಮೊದಲು ಯಾವ ಪಾರ್ಟಿಯಲ್ಲಿದ್ದರು? ಇಲ್ಲಿಂದ (ಕಾಂಗ್ರೆಸ್) ಎಲ್ಲಾ ಲಾಭ ಪಡೆದುಕೊಂಡು ಈಗ ಬಿಜೆಪಿಗೆ ಹೋಗಿ ಅವರ ಪರವಾಗಿ ಮಾತನಾಡುತ್ತಿದ್ದಾರೆ. ಹಿಂದೆ ಬಿಜೆಪಿಯವರ ಬಗ್ಗೆ ಅವರು ಆಡಿದ್ದ ಮಾತುಗಳನ್ನು ನಾನು ಬಿಚ್ಚಿಡಲೇ?” ಎಂದು ಪ್ರಶ್ನಿಸಿದರು. ಅಸ್ತಿತ್ವಕ್ಕಾಗಿ ಪಕ್ಷಾಂತರ ಮಾಡುವವರಿಗೆ ಜನಪರ ಕಾಳಜಿ ಇಲ್ಲ ಎಂದು ಅವರು ಲೇವಡಿ ಮಾಡಿದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಕುಮಾರಸ್ವಾಮಿಗೆ ತಿರುಗೇಟು
ಇದೇ ವೇಳೆ ಹೆಚ್.ಡಿ. ಕುಮಾರಸ್ವಾಮಿ ಅವರ ನಿಲುವುಗಳನ್ನು ಟೀಕಿಸಿದ ಸಿದ್ದರಾಮಯ್ಯ, “ಬಿಜೆಪಿ ಮತ್ತು ಆರ್.ಎಸ್.ಎಸ್ ಬಗ್ಗೆ ಕುಮಾರಸ್ವಾಮಿ ಹಿಂದೆ ಎಂತೆಂತಹ ಮಾತುಗಳನ್ನು ಆಡಿದ್ದರು? ಇಂದು ತಮ್ಮ ರಾಜಕೀಯ ಉಳಿವಿಗಾಗಿ ಮೋದಿಯವರನ್ನು ಮತ್ತು ಬಿಜೆಪಿಯನ್ನು ಅಪ್ಪಿಕೊಂಡಿದ್ದಾರೆ. ಅಧಿಕಾರಕ್ಕಾಗಿ ಯಾರ ಕಾಲು ಹಿಡಿಯಲೂ ಅವರು ಸಿದ್ಧರಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
