ಯಶಸ್ವಿನಿ ಯೋಜನೆ: ರಾಜ್ಯದ ಸಹಕಾರ ಸಂಘಗಳ ಸದಸ್ಯರ ಪಾಲಿಗೆ ವರದಾನವಾಗಿರುವ ‘ಯಶಸ್ವಿನಿ‘ ಆರೋಗ್ಯ ರಕ್ಷಣಾ ಯೋಜನೆಯನ್ನು 2025-26ನೇ ಸಾಲಿಗೆ ಮುಂದುವರಿಸಲು ಸರ್ಕಾರ ಅಧಿಕೃತ ಮಾರ್ಗಸೂಚಿ ಪ್ರಕಟಿಸಿದೆ. ಈ ಬಾರಿ ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಲಾಗಿದ್ದು, ಹಲವು ಹೊಸ ಬದಲಾವಣೆಗಳನ್ನು ತರಲಾಗಿದೆ ಎಂದು ದಾವಣಗೆರೆ ಜಿಲ್ಲೆ ಸಹಕಾರ ಸಂಘಗಳ ಉಪ ನಿಬಂಧಕರಾದ ಮಧುಶ್ರೀನಿವಾಸ.ಟಿ ಮಾಹಿತಿ ನೀಡಿದ್ದಾರೆ.
ನವಜಾತ ಶಿಶುಗಳಿಗೂ ಉಚಿತ ಚಿಕಿತ್ಸೆ
ಯೋಜನೆಯ ಇತಿಹಾಸದಲ್ಲೇ ಮೊದಲ ಬಾರಿಗೆ, ಸದಸ್ಯತ್ವ ಹೊಂದಿರುವ ಕುಟುಂಬದಲ್ಲಿ ಜನಿಸುವ ನವಜಾತ ಶಿಶುವಿಗೂ ತಾಯಿಯ ಆಧಾರ್ ಕಾರ್ಡ್ ಆಧಾರದ ಮೇಲೆ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ನಂತರದ ದಿನಗಳಲ್ಲಿ ಮಗುವಿನ ಹೆಸರನ್ನು ಅಧಿಕೃತವಾಗಿ ಕಾರ್ಡ್ಗೆ ಸೇರ್ಪಡೆ ಮಾಡಬಹುದಾಗಿದೆ.
ನೋಂದಣಿ ಮತ್ತು ಕಾಲಮಿತಿ
-
ನೋಂದಣಿ ಆರಂಭ: ಜನವರಿ 3, 2026 ರಿಂದ ರಾಜ್ಯಾದ್ಯಂತ ಸದಸ್ಯರ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ.
-
ಕೊನೆಯ ದಿನಾಂಕ: ಮಾರ್ಚ್ 31, 2026 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
-
ಯೋಜನೆಯ ಅವಧಿ: ಏಪ್ರಿಲ್ 1, 2026 ರಿಂದ ಮಾರ್ಚ್ 31, 2027 ರವರೆಗೆ ಈ ಸೌಲಭ್ಯ ಚಾಲ್ತಿಯಲ್ಲಿರುತ್ತದೆ.
-
ಸದಸ್ಯತ್ವದ ಗುರಿ: ರಾಜ್ಯಾದ್ಯಂತ ಒಟ್ಟು 50 ಲಕ್ಷ ಸದಸ್ಯರನ್ನು ಯೋಜನೆಯಡಿ ತರುವ ಗುರಿ ಹೊಂದಲಾಗಿದೆ.
ವಂತಿಗೆ ಮತ್ತು ಚಿಕಿತ್ಸಾ ಮಿತಿ
-
ಗ್ರಾಮೀಣ ಭಾಗ: 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ 500 ರೂ. ವಂತಿಗೆ, ಹೆಚ್ಚುವರಿ ಸದಸ್ಯರಿದ್ದಲ್ಲಿ ತಲಾ 100 ರೂ. ಪಾವತಿಸಬೇಕು.
-
ನಗರ ಭಾಗ: 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ 1000 ರೂ. ವಂತಿಗೆ, ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ. ನಿಗದಿಪಡಿಸಲಾಗಿದೆ.
-
ಚಿಕಿತ್ಸಾ ಮಿತಿ: ಪ್ರತಿ ಕುಟುಂಬಕ್ಕೆ ವಾರ್ಷಿಕ ಗರಿಷ್ಠ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಸೇವೆ ಲಭ್ಯವಿದೆ.
-
SC/ST ವರ್ಗ: ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ.
ಯಾರು ಅರ್ಹರು?
- ಫಲಾನುಭವಿಗಳು ಸಹಕಾರ ಸಂಘಗಳಲ್ಲಿ ಕಡ್ಡಾಯವಾಗಿ ಸದಸ್ಯರಾಗಿರಬೇಕು.
- ಸಹಕಾರ ಸಂಘಗಳ ನೌಕರರಾಗಿದ್ದಲ್ಲಿ ಕನಿಷ್ಠ 3 ವರ್ಷ ಸೇವೆ ಸಲ್ಲಿಸಿರಬೇಕು.
- ಮಾಸಿಕ ವೇತನ 30,000 ರೂ. ಗಳಿಗಿಂತ ಹೆಚ್ಚಿರುವವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ.
- ಯಾವುದೇ ಕಾರಣಕ್ಕೂ ಸುಳ್ಳು ಮಾಹಿತಿ ನೀಡಿ ನೋಂದಾಯಿಸಿಕೊಂಡರೆ ಸದಸ್ಯತ್ವ ರದ್ದಾಗುವುದಲ್ಲದೆ, ಕಟ್ಟಿದ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು.
ಯಾವೆಲ್ಲಾ ಕಾಯಿಲೆಗಳಿಗೆ ಚಿಕಿತ್ಸೆ?
ಒಟ್ಟು 2,128 ಚಿಕಿತ್ಸೆಗಳು ಈ ಯೋಜನೆಯಡಿ ಲಭ್ಯವಿದ್ದು, ಇದರಲ್ಲಿ ಕಿಡ್ನಿ ವೈಫಲ್ಯ, ಕ್ಯಾನ್ಸರ್, ಹೃದಯರೋಗ, ಹರಿಗೆ ಸೇರಿದಂತೆ ಪ್ರಮುಖ ಶಸ್ತ್ರಚಿಕಿತ್ಸೆಗಳು ಸೇರಿವೆ. ಫಲಾನುಭವಿಗಳು ನೆಟ್ವರ್ಕ್ ಆಸ್ಪತ್ರೆಗಳ ಜನರಲ್ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯಲು ಅರ್ಹರಿರುತ್ತಾರೆ; ಸ್ಪೆಷಲ್ ವಾರ್ಡ್ ಬಯಸಿದಲ್ಲಿ ಹೆಚ್ಚುವರಿ ವೆಚ್ಚವನ್ನು ಅವರೇ ಭರಿಸಬೇಕು ಎಂದು ದಾವಣಗೆರೆ ಜಿಲ್ಲೆ ಸಹಕಾರ ಸಂಘಗಳ ಉಪ ನಿಬಂಧಕರಾದ ಮಧುಶ್ರೀನಿವಾಸ.ಟಿ ಮಾಹಿತಿ ನೀಡಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ದಾಖಲೆಗಳು ಅಗತ್ಯ:
ಯಶಸ್ವಿನಿ ಯೋಜನೆ ನೋಂದಣಿ ಸಮಯದಲ್ಲಿ ಆಧಾರ್ ಕಾರ್ಡ್ ಮತ್ತು ಸಕ್ರಿಯ ಮೊಬೈಲ್ ಸಂಖ್ಯೆ ನೀಡುವುದು ಕಡ್ಡಾಯವಾಗಿದೆ.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
